ಕಲಬುರಗಿ: ವಾಡಿ ಠಾಣೆ ಪಿಎಸ್ಐ ವಿಜಯಕುಮಾರ್ ಬಾವಗಿ ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ಇಂದು ಮಾದಿಗ ಸಮುದಾಯದ ಮುಖಂಡರಾದ ಮಲ್ಲಿಕಾರ್ಜುನ ಸೈದಾಪುರ ನೇತೃತ್ವದಲ್ಲಿ ಎಸ್ಪಿ ಯಡಾ ಮಾರ್ಟಿನ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆಯಲ್ಲಿ ಮಾತನಾಡಿದ ಮುಖಂಡರು, ದಕ್ಷ ಪೊಲೀಸ್ ಅಧಿಕಾರಿ ವಿಜಯಕುಮಾರ್ ಬಾವಗಿ ಅವರನ್ನು ವಾಡಿ ಠಾಣೆಗೆ ಪುನಃ ನಿಯೋಜಿಸುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಇತ್ತೀಚಿಗೆ ರಾವೂರ ಗ್ರಾಮದಲ್ಲಿ ನಡೆದ ನಿಷೇಧಾಜ್ಞೆ ಉಲ್ಲಂಘಿಸಿ ರಥೋತ್ಸವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿ ಅಮಾನತು ಮಾಡಲಾದ ಪಿಎಸ್ ಐ ಬಾವಗಿ ಅವರು ಜಾತ್ರೆ ಸಮಿತಿಯವ ಬಳಿ ಮುಚ್ಚಳಿಕೆ ಕರೆಸಿಕೊಳ್ಳುವ ಮೂಲಕ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಉದ್ದೇಶ ಪೂರಕವಾಗಿ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಪಿ.ಎಸ್.ಐ ಬಾವಗಿ ಲಾಕ್ ಡೌನ್ ಘೋಷಣೆಯಿಂದ ಕೊರೋನಾ ವಾರಿಯರನಂತೆ ಊಟ ನಿದ್ದೆ ನಿಟ್ಟು ಶ್ರಮಿಸಿದ್ದು, ಇಂತಹ ದಕ್ಷ, ನಿಷ್ಠಾವಂತ ಅಧಿಕಾರಿಯನ್ನು ಪುಸಲಾಯಿಸಿ ಬಲಿಪಶು ಮಾಡಲಾಗಿದೆ ಎಂದರು.
ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ಯಾವುದೇ ತಪ್ಪು ಮಾಡದೆ ಶಿಕ್ಷೆಗೆ ಗುರಿಯಾಗಿರುವ ಬಾವಗಿ ಅವರ ಅಮಾನತು ಆದೇಶವನ್ನು ಹಿಂಪಡೆದು ಪುನಃ ಕರ್ತವ್ಯಕ್ಕೆ ಹಾಜರು ಪಡಿಸಬೇಕೆಂದು ಯುವ ಮುಖಂಡರಾದ ಜಗದೀಶ್ ಮುಕ್ಕನಾಳ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…