ಮನೆಯಲ್ಲೇ ಬಸವ ಜಯಂತಿ ಆಚರಿಸೋಣ: ಅಂಬಾರಾಯ ಅಷ್ಠಗಿ

0
50

ಕಲಬುರಗಿ: ಕೊರೋನಾ ಮಹಾಮಾರಿಯಿಂದಾಗಿ ದೇಶದಲ್ಲಿ ಲಾಕ್‌ ಡೌನ್ ಜಾರಿಯಲ್ಲಿರುವುದರಿಂದ ಈ ಬಾರಿ ಬಸವ ಜಯಂತಿಯನ್ನು ಮನೆಗಳಲ್ಲಿಯೇ ಸರಳವಾಗಿ ಹಾಗೂ ಅರ್ಥರ್ಪೂರ್ಣವಾಗಿ ಆಚರಿಸಬೇಕೆಂದು ಜಿ.ಪಂ.ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಕೋರಿದ್ದಾರೆ.

ಕೊರೊನಾ ವೈರಾಣು ಹರಡದಂತೆ ನೋಡಿಕೊಳ್ಳಲು ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಇರುವುದರಿಂದ ಈ ಬಾರಿ ಎಲ್ಲರೂ ಮನೆಯಲ್ಲೇ ಶರಣರ ವಚನ ಪಠಣ ಮಾಡುತ್ತ ಹಾಗೂ ಬಸವಾದಿ ಪ್ರಮಥರ ಆಚಾರ, ವಿಚಾರಗಳನ್ನು ವಿಶ್ವದಾದ್ಯಂತ ಪಸರಿಸುವ ಮೂಲಕ ಜಗತ್ತಿಗೆ ಸಮ ಸಮಾಜದ ಕನಸನ್ನು ಕಂಡಿದ್ದ ಬಸವೇಶ್ವರ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ವಿಶ್ವ ಗುರು ಬಸವೇಶ್ವರರ್ ಜಯಂತಿಯನ್ನು ಸರಳವಾಗಿ ಆಚರಿಸಬೇಕಾಗಿದೆ.

Contact Your\'s Advertisement; 9902492681

ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ವಿಶ್ವಗುರು ಬಸವಣ್ಣನವರು ರಚಿಸಿದ ವಚನಗಳಲ್ಲಿನ ತತ್ವಾದರ್ಶ ಅಳವಡಿಸಿಕೊಳ್ಳೋಣ, ಹಾಗೆಯೇ ಜಗತ್ತಿನಿಂದ ಮಹಾಮಾರಿ ಕೊರೊನಾ ವೈರಸ್ ತೊಲಗಲಿ ಎಂದು ದೃಢಸಂಕಲ್ಪದೊಂದಿಗೆ ಪ್ರಾರ್ಥಿಸೋಣ ಎಂದು ಅಂಬಾರಾಯ ಅಷ್ಟಗಿ ಹೇಳಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here