ಕಲಬುರಗಿ: ಕೊರೋನಾ ಮಹಾಮಾರಿಯಿಂದಾಗಿ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಈ ಬಾರಿ ಬಸವ ಜಯಂತಿಯನ್ನು ಮನೆಗಳಲ್ಲಿಯೇ ಸರಳವಾಗಿ ಹಾಗೂ ಅರ್ಥರ್ಪೂರ್ಣವಾಗಿ ಆಚರಿಸಬೇಕೆಂದು ಜಿ.ಪಂ.ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಕೋರಿದ್ದಾರೆ.
ಕೊರೊನಾ ವೈರಾಣು ಹರಡದಂತೆ ನೋಡಿಕೊಳ್ಳಲು ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಇರುವುದರಿಂದ ಈ ಬಾರಿ ಎಲ್ಲರೂ ಮನೆಯಲ್ಲೇ ಶರಣರ ವಚನ ಪಠಣ ಮಾಡುತ್ತ ಹಾಗೂ ಬಸವಾದಿ ಪ್ರಮಥರ ಆಚಾರ, ವಿಚಾರಗಳನ್ನು ವಿಶ್ವದಾದ್ಯಂತ ಪಸರಿಸುವ ಮೂಲಕ ಜಗತ್ತಿಗೆ ಸಮ ಸಮಾಜದ ಕನಸನ್ನು ಕಂಡಿದ್ದ ಬಸವೇಶ್ವರ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ವಿಶ್ವ ಗುರು ಬಸವೇಶ್ವರರ್ ಜಯಂತಿಯನ್ನು ಸರಳವಾಗಿ ಆಚರಿಸಬೇಕಾಗಿದೆ.
ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ವಿಶ್ವಗುರು ಬಸವಣ್ಣನವರು ರಚಿಸಿದ ವಚನಗಳಲ್ಲಿನ ತತ್ವಾದರ್ಶ ಅಳವಡಿಸಿಕೊಳ್ಳೋಣ, ಹಾಗೆಯೇ ಜಗತ್ತಿನಿಂದ ಮಹಾಮಾರಿ ಕೊರೊನಾ ವೈರಸ್ ತೊಲಗಲಿ ಎಂದು ದೃಢಸಂಕಲ್ಪದೊಂದಿಗೆ ಪ್ರಾರ್ಥಿಸೋಣ ಎಂದು ಅಂಬಾರಾಯ ಅಷ್ಟಗಿ ಹೇಳಿದ್ದಾರೆ.
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…