ಕಲಬುರಗಿ: ಜಿಲ್ಲೆಯಲ್ಲಿ ಪ್ರತಿ ದಿನ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಅತಿ ಹೆಚ್ಚು ಸೋಂಕಿತರು ಇರುವ ಬಡಾವಣೆಗಳನ್ನು ಸಂಪರ್ಕಿಸುವ 95 ರಸ್ತೆಗಳನ್ನು ಸೀಲ್ಡೌನ್ ಮಾಡಲು ನಿರ್ಧರಿಸಿದ್ದು, ಇದಕ್ಕಾಗಿ ಮಹಾನಗರ ಪಾಲಿಕೆ ಆಯುಕ್ತರು 1 ಸಾವಿರ ಪತ್ರಾಸ್ ತರಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಸೋಂಕು ಹರಡಿರುವ ಪ್ರದೇಶಗಳ ಸಿಲ್ ಡೌನ್ ಮಾಡಲಿರುವ ರಸ್ತೆಗಳನ್ನು ಗುರುತಿಸುವ ಕಾರ್ಯವನ್ನು ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರು ಆರಂಭಿಸಿದ್ದಾರೆ ಎನ್ನಲಾಗಿದೆ.
ಆಜಾದಪುರ, ಬುಲಂದ್ ಪರ್ವೇಜ್, ಕಾಲೊನಿ, ತಾಜ ನಗರ, ಹಾಗರಗಾ ಸರ್ಕಲ್, ರಫೀಕ್ ಚೌಕ್, ಕೆಸಿಟಿ ಕಾಲೇಜಿನಿಂದ ರಿಂಗ್ ರೋಡ್, ರಾಮಜಿ ನಗರದಿಂದ ಟಿನ್ನಿಪರ್ಲ್ ಶಾಲೆ, ಮಿಜಗುರಿ ಮುಖ್ಯರಸ್ತೆ, ಎಎಸ್ಎಂ ಆಸ್ಪತ್ರೆ ರಸ್ತೆ, ಚುನ್ನಾಭಟ್ಟಿ ರಸ್ತೆ, ನೂರ್ಭಾಗ್ ರಸ್ತೆ, ಯಾಕೂಬ್ ತಹಾರಿ, ಪ್ರಕಾಶ ಏಷಿಯನ್ ಮಾಲ್ದಿಂದ ನಗರೇಶ್ವರ ಶಾಲೆ, ಎಂ.ಬಿ. ನಗರ ಮುಖ್ಯರಸ್ತೆ, ಸಂತ್ರಾಸವಾಡಿ ಮಸೀದಿ ರಸ್ತೆ, ಬಸವೇಶ್ವರ ಕಾಲೊನಿ, ಜಿಡಿಎ ಲೇಔಟ್, ಖರ್ಗೆ ಪೆಟ್ರೋಲ್ ಬಂಕ್ದಿಂದ ನಗರದ ಹೊರಗೆ ಹೋಗುವ ಒಂದು ರಸ್ತೆ, ಸೇಡಂ ರಸ್ತೆಯ ವೀರೇಂದ್ರ ಪಾಟೀಲ ನಗರ ಪ್ರವೇಶ ದ್ವಾರ, ಹೀರಾಪುರದಿಂದ ಬಸ್ ನಿಲ್ದಾಣ ರಸ್ತೆ ಮಾರ್ಗವಾಗಿ ಮಿರ್ಚಿ ಗೋದಾಮು, ಗಂಗಾನಗರ ಹನುಮಾನ ಟೆಂಪಲ್ ರಸ್ತೆ ಹೀಗೆ 95ಕ್ಕೂ ಹೆಚ್ಚಿನ ರಸ್ತೆಗಳನ್ನು ಸೀಲ್ಡೌನ್ ಮಾಡುವ ಮೂಲಕ ಜನರ ಓಡಾಟವನ್ನು ನಿರ್ಬಂಧಿಸುವ ಸಾಧ್ಯತೆಗಳಿವೆ.
ರಾಜ್ಯದ ಕೆಲವೆಡೆ ಲಾಕ್ಡೌನ್ ಸಡಿಲಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಆದರೆ, ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದು, 36 ಜನರಲ್ಲಿ ಸೋಂಕಿರುವುದು ದೃಢಪಟ್ಟಿದೆ. ಇನ್ನೂ ಒಂದು ಸಾವಿರಕ್ಕೂ ಅಧಿಕ ಮಾದರಿಗಳ ತಪಾಸಣಾ ವರದಿಗಳು ಬರಬೇಕಿದೆ. ಹೀಗಾಗಿ, ರೆಡ್ಝೋನ್ ಪಟ್ಟಿಯಲ್ಲಿರುವ ಜಿಲ್ಲೆಯಲ್ಲಿ ಲಾಕ್ಡೌನ್ ಸಡಿಲಿಕೆ ಮಾಡುವ ಸಂಭವ ಕಡಿಮೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…