ಎಸ್‌ಯುಸಿಐ ಸಂಸ್ಥಾಪನಾ ದಿನ: ಬಡವರ ಬದುಕಿನ ಆಸರೆಗಳನ್ನು ಕೊಂದಿದೆ ಕೊರೊನಾ

ವಾಡಿ: ಕೊರೊನಾ ವೈರಸ್ ದಾಳಿಯಿಂದ ಭಾರತ ಇಂದು ಸಂದಿಗ್ಧ ಪರಿಸ್ಥಿತಿಯಲ್ಲಿದೆ. ದುಡಿಯುವ ಜನರ ಬದುಕಿನ ಆಸರೆಗಳನ್ನೇ ಕೊರೊನಾ ಕೊಂದು ಹಾಕಿದೆ ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ಸದಸ್ಯ, ವಾಡಿ ನಗರ ಸಮಿತಿ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪಾ ಆರ್.ಕೆ ಹೇಳಿದರು.

ಪಟ್ಟಣದ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ೭೩ನೇ ಸಂಸ್ಥಾಪನಾ ದಿನದ ನಿಮಿತ್ತ ಸಂಸ್ಥಾಪಕ ಅಧ್ಯಕ್ಷ ಕಾಮ್ರೇಡ್ ಶಿವದಾಸ ಘೋಷ್ ಅವರ ಭಾವಚಿತ್ರಕ್ಕೆ ಕೆಂಪು ನಮನ ಸಲ್ಲಿಸಿ ಅವರು ಮಾತನಾಡಿದರು. ಕೊರೊನಾದಿಂದ ಬಂಡವಾಳಶಾಹಿ ಪ್ರಣೀತ ಅಭಿವೃದ್ಧಿಯು ಎಂತಹದ್ದು ಎಂಬುದನ್ನು ಬಯಲುಗೊಳಿಸಿದೆ. ಎಲ್ಲಾ ಸರಕಾರಗಳು ಬಂಡವಾಳಶಾಹಿ ಪರವಾದ ನೀತಿಗಳನ್ನು ಅಪ್ರಜಾಸತ್ತಾತ್ಮಕವಾಗಿ ಜನಗಳ ಮೇಲೆ ಹೇರುತ್ತಿವೆ. ಜನರನ್ನು ಜಾತಿ, ಧರ್ಮ, ಆಹಾರ, ಭಾಷೆ, ಗಡಿ ಹೀಗೆ ಅನೇಕಾನೇಕ ರೀತಿಯಲ್ಲಿ ಒಗ್ಗಟ್ಟು ಒಡೆದು ಹಾಕಲಾಗುತ್ತಿದೆ. ಇಂತಹ ಕೀಳು ರಾಜಕೀಯಕ್ಕೆ ಪರ್ಯಾಯವಾಗಿ ಭಗತ್‌ಸಿಂಗ್, ನೇತಾಜಿ ಮುಂತಾದ ಕ್ರಾಂತಿಕಾರಿಗಳ ಸಂಧಾನತೀತ ಹೋರಾಟ ಪರಂಪರೆಯನ್ನು ಎತ್ತಿಹಿಡಿಯಲು ಜನತೆ ಮುಂದೆ ಬರಬೇಕು ಎಂದು ಕರೆ ನೀಡಿದರು.

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಠಿಯಾಗಿದ್ದು, ಸಂಪತ್ತು ಸೃಷ್ಠಿಸುವ ದುಡಿಯುವ ವರ್ಗ ತೀವ್ರ ಸಂಕಷ್ಟದಲ್ಲಿದೆ. ದುಡಿಯುವ ವರ್ಗ ಅಧಿಕಾರಕ್ಕೆ ಬರಬೇಕು. ಮಾನವನಿಂದ ಮಾನವನ ಶೋಷಣಾರಹಿತ ಸಮಾಜವನ್ನು ನಿರ್ಮಿಸುವ ಕನಸಿನೊಂದಿಗೆ ಪಕ್ಷವನ್ನು ಕಟ್ಟಿರುವ ಮಹಾನ್ ಮಾರ್ಕ್ಸ್‌ವಾದಿ ಚಿಂತಕ ಕಾಮ್ರೇಡ್ ಶಿವದಾಸ ಘೋಷ್, ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿಯಿಂದ ಮಾತ್ರ ದೇಶದ ಜನತೆ ಎಲ್ಲಾ ರೀತಿಯ ಶೋಷಣೆಗಳಿಂದ ಮುಕ್ತರಾಗಲು ಸಾಧ್ಯ ಎಂದು ವಿಶ್ಲೇಷಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಮಾರ್ಕ್ಸ್‌ವಾದ, ಲೆನಿನ್‌ವಾದ ಮತ್ತು ಕಾಮ್ರೇಡ್ ಶಿವದಾಸ ಘೋಷ ಅವರ ಚಿಂತನೆಗಳನ್ನು ಮತ್ತಷ್ಟು ಸಂಪತ್ಭರಿತಗೊಳಿಸಬೇಕಿದೆ ಎಂದರು.

ಪಕ್ಷದ ಸದಸ್ಯರಾದ ರಾಜು ಒಡೆಯರಾಜ, ಶರಣು ಹೇರೂರ, ಯೇಸಪ್ಪ ಕೇದಾರ, ಶ್ರೀಶರಣ ಹೊಸಮನಿ, ಅರುಣ ಹಿರೇಬಾನರ ಪಾಲ್ಗೊಂಡಿದ್ದರು. ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿ ಚಿರುವಾಯುವಾಗಲಿ ಎಂದು ಭಾಗವಹಿಸಿದ್ದ ಕೆಲವೇ ಜನ ಸಂಗಾತಿಗಳು ಘೋಷಣೆ ಕೂಗಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420