ಕಲಬುರಗಿ: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಸಂಸದ ಅನಂತ ಕುಮಾರ್ ಹೆಗಡೆರವರ ಸಂಸತ್ ಸದಸ್ಯತ್ವನ್ನು ರದ್ದುಗೊಳಿಸಬೇಕೆಂದು ಸಿಪಿಎಂನ ರಾಜ್ಯ ಸಮಿತಿ ಸದಸ್ಯ ಮಾರುತಿ ಮಾನ್ಪಡೆ ಒತ್ತಾಯಿಸಿದ್ದಾರೆ.
ಕೊರೋನ ಸೋಂಕಿನ ಮುಸ್ಲಿಮ್ ಸಮುದಾಯದ ವ್ಯಕ್ತಿಗೆ ಸಂಸದ ಅನಂತಕುಮಾರ್ ಹೆಗಡೆ, ಕೊರೋನ ಜಿಹಾದ್ ಎಂಬ ಪಟ್ಟ ಕಟ್ಟುವ ಮೂಲಕ ಸಮಾಜದಲ್ಲಿ ಧ್ವೇಷದ ಭಾವನೆ, ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ವರ್ತಿಸುತ್ತಿದ್ದಾರೆ. ಇಂತವರು ಸಂಸತ್ನಲ್ಲಿ ಕೂರಲು ಯೋಗ್ಯರಲ್ಲ.
ತಬ್ಲಿಗಿ ಸಭೆಯ ಮುಖ್ಯಸ್ಥರ ಖಾತೆಗೆ ಹಣ ಜಮೆ ಆಗಿರುವುದನ್ನೇ ಮುಂದಿಟ್ಟುಕೊಂಡು ಕೊರೋನ ಹರಡಲು ಕಳಿಸಿರುವ ಹಣ ಎನ್ನುವ ರೀತಿಯಲ್ಲಿ ಅನಂತ್ಕುಮಾರ್ ಹೆಗಡೆ, ಸಮಾಜದಲ್ಲಿ ಶಾಂತಿಯನ್ನು ಕದಡುವಂತಹ ಕೆಲಸದಲ್ಲಿ ನಿರತರಾಗಿದ್ದಾರೆ. ಹಣ ಜಮೆ ಆಗಿರುವ ವಿಚಾರ ಇನ್ನು ತನಿಖೆ ಹಂತದಲ್ಲಿರುವಾಗಲೇ ಇವರು ಕೋಮುವಾದಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದು ಸಮಾಜದ ಸ್ವಸ್ಥ್ಯವನ್ನು ಹಾಳು ಮಾಡುವಂತಹದ್ದಾಗಿದೆ.
ದೇಶಾದ್ಯಂತ ವಲಸೆ ಕಾರ್ಮಿಕರು, ಅಲೆಮಾರಿ ಜನಾಂಗದವರು ಮತ್ತು ಕೂಲಿ ಕಾರ್ಮಿಕರು ಹಸಿವಿನಿಂದ ಸಾಯುವಂತಹ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ. ಈ ಬಗ್ಗೆ ಕಿಂಚಿತ್ತೂ ಕಾಳಜಿ ವ್ಯಕ್ತಪಡಿಸದ ಅನಂತ ಕುಮಾರ್ ಹೆಗಡೆ, ಸದಾ ದೇಶವನ್ನು ಒಡೆಯುವಂತಹ ಮಾತುಗಳನ್ನಷ್ಟೆ ಆಡುತ್ತಾರೆ. ಹೀಗಾಗಿ ಅವರು ಸಂಸದರಾಗಿ ಮುಂದುವರೆಲು ಅರ್ಹರಲ್ಲವೆಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರಿಂದ ವಕ್ಫ್ ಇಲಾಖೆ ಪ್ರಗತಿ ಪರಿಶೀಲನೆ ಕಲಬುರಗಿ; ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗೆ…
ಕಲಬುರಗಿ.ಮುಖ್ಯಮಂತ್ರಿ ಸಿದ್ದರಾಮಯ್ಯನವರು 17ನೇ ಸೆಪ್ಟೆಂಬರ್ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮತ್ತು ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕಲಬುರಗಿ ಭೇಟಿಯ…
ಕಲಬುರಗಿ: ಇಲ್ಲಿನ ಬಸವ ಸಮಿತಿಯ ಅಕ್ಕನ ಬಳಗದ ವತಿಯಿಂದ ಸೆ. 21ರಿಂದ ಎರಡು ದಿನಗಳ ಕಾಲ 14ನೇ ಮಹಾದೇವಿಯಕ್ಕಳ ಸಮ್ಮೇಳನ…
ಕಲಬುರಗಿ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ಫಲಿತಾಂಶದ ಪಟ್ಟಿಯಲ್ಲಿ ಗೋದುತಾಯಿ ಶಿಕ್ಷಣ ಮಹಿಳಾ ಮಹಾವಿದ್ಯಾಲಯದ ವಿಧ್ಯಾರ್ಥಿನಿಯರು…
ಕಲಬುರಗಿ: ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವಿವೇಕಾನಂದ ಪ್ರಾಥಮಿಕ ಮತ್ತು ಸಚ್ಚಿದಾನಂದ ಪ್ರೌಢ ಶಾಲೆಯ ಮಕ್ಕಳು ತಾಲೂಕ…
ನಿಮ್ಮ ಕನಸಿಗೆ ರೆಕ್ಕೆ ಕಟ್ಟಲು ನಿಮ್ಮೂರಿಗೂ ಬರ್ತಿದೆ ಸರಿಗಮಪ ಆಡಿಷನ್, ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು…