ಪಿ.ರಾಜೀವ್ ಕೂಡಾ ಪೊಲೀಸ್ ವಾಹನದಲ್ಲಿ ಹಣ ಸಾಗಿಸುತ್ತಿದ್ದರೇ?: ಪ್ರಿಯಾಂಕ್ ಖರ್ಗೆ ತಿರುಗೇಟು

0
148

ಕಲಬುರಗಿ: ಈ ಹಿಂದೆ ಪೊಲೀಸ್ ಅಧಿಕಾರಿಯಾಗಿದ್ದ ಬಿಜೆಪಿ ಶಾಸಕ ಪಿ.ರಾಜೀವ್ ಕೂಡ ಚುನಾವಣೆ ಸಂದರ್ಭದಲ್ಲಿ ಪೊಲೀಸ್ ವಾಹನದಲ್ಲಿ ಹಣ ಸಾಗಿಸುತ್ತಿದ್ದರೇ ? ಎಂದು ಸಮಾಜ ಕಲ್ಯಾಣ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಪೊಲೀಸ್ ಇಲಾಖೆಯಲ್ಲಿದ್ದ ಕಾರಣ ಶಾಸಕರಾಗಿ ಆಯ್ಕೆಯಾದ ರಾಜೀವ್  ಅವರು ಅದೇ ಪೊಲೀಸ್ ಇಲಾಖೆ ಕುರಿತು ಅವಮಾನಕರ ಹೇಳಿಕೆ ನೀಡಿದ್ದು ಈ ಕೂಡಲೇ ಅವರು ಇಲಾಖೆಯ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.

Contact Your\'s Advertisement; 9902492681

ಪೊಲೀಸ್ ವಾಹನದಲ್ಲಿ ಹಣ ಸಾಗಿಸಲಾಗುತ್ತಿದೆ ಎನ್ನುವ ಅವರ ಹೇಳಿಕೆ ಜಿಲ್ಲೆಯ ಪೊಲೀಸರ ಆತ್ಮಗೌರವಕ್ಕೆ ಧಕ್ಕೆತರುವಂತಿದೆ ಎಂದ ಪ್ರಿಯಾಂಕ್ ಖರ್ಗೆ ಅವರು ರಾಜೀವ ಅವರು ಕೂಡ ಪೊಲೀಸ್ ಇಲಾಖೆಯಲ್ಲಿದ್ದಾಗ ಹಾಗೆ ಹಣ ಸಾಗಿಸುತ್ತಿದ್ದರಾ? ಎಂದು ಪ್ರಶ್ನಿಸಿದರು.  ಜಿಲ್ಲೆಯ ಪೊಲೀಸರು ತಮ್ಮ ಕರ್ತವ್ಯದಿಂದ ಹೆಸರುವಾಸಿಯಾಗಿದ್ದು ಚುನಾವಣಾ ಆಯೋಗದ ಆದೇಶದಂತೆ ಕಾರ್ಯನಿರ್ಹಹಿಸುತ್ತಿದ್ದು ಚೆಕ್ ಪೋಸ್ಟ್ಗಳಲ್ಲಿ ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಶಾಸಕರು ಇಂತಹ ಹೇಳಿಕೆ ನೀಡುವ ಮೂಲಕ ಅವರ ಕರ್ತವ್ಯವನ್ನೇ ಅವಮಾನಿಸುವುದರ ಜೊತೆಗೆ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದರು.

ಪೊಲೀಸರ ಹಿತ ಕಾಪಾಡಿ ಹಾಗೂ ರಕ್ಷಣೆ ಮಾಡುವ ಕೆಲಸ ಮಾಡಬೇಕಿದ್ದ ಶಾಸಕರು ಪೊಲೀಸ್ ಇಲಾಖೆಯ ವಿರುದ್ದ ಅಪಮಾನಕರ ಹೇಳಿಕೆ ನೀಡುವ ಮೂಲಕ ಇಲಾಖೆಯ ಅಧಿಕಾರಿಗಳ ಕರ್ತವ್ಯನಿಷ್ಠೆಯನ್ನು ಕೆಟ್ಟದಾಗಿ ಬಿಂಬಿಸಿದ್ದಾರೆ. ಇದು ಅವರ ಮೇಲೆ ಕೆಲಸದ ಮೇಲೆ ಪರಿಣಾಮ ಬೀರಿದೆ. ಹಾಗಾಗಿ, ರಾಜೀವ್  ಅವರು ಈ ಕೂಡಲೇ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ಪೋಲಿಸರ ಕ್ಷಮೆ ಕೇಳಲಿ ಎಂದು ಒತ್ತಿ ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here