ಬಿಸಿ ಬಿಸಿ ಸುದ್ದಿ

ಮಾಸ್ಕ್ ಧರಿಸಿ ಆಗಾಗ ಕೈಗಳನ್ನು ತೊಳೆಯುತ್ತಿರಿ: ತಹಸೀಲ್ದಾರ್ ಎನ್.ಬಿರಾದಾರ್

ಸುರಪುರ: ತಾವೆಲ್ಲ ಪ್ರಯಾಣ ಮಾಡುವವರು ಮೊದಲು ನಿಮ್ಮ ಆರೋಗ್ಯದ ಕಡೆಗೆ ಗಮನ ನೀಡಿ,ಮುಖಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಆಗಾಗ ನಿಮ್ಮ ಕೈಗಳನ್ನು ತೊಳೆಯುತ್ತಿರಿ ಅಥವಾ ಸ್ಯಾನಿಟೈಜರ್ ಹಚ್ಚಿಕೊಳ್ಳುವಂತೆ ತಹಸೀಲ್ದಾರ್ ನಿಂಗಣ್ಣ ಬಿರಾದಾರ್ ಜನತೆಗೆ ಅರಿವಿ ಪಾಠ ಮಾಡಿದರು.

ತಾಲೂಕಿನ ಬಂಡೊಳ್ಳಿ ಬಳಿಯಲ್ಲಿ ನಿರ್ಮಿಸಲಾದ ಕೋವಿಡ್-೧೯ ಪೊಲೀಸ್ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದ ಸಮಯದಲ್ಲಿ ಬೈಕ್ ಸವಾರನೊಬ್ಬ ಮಾಸ್ಕ್ ಧರಿಸದೆ ಓಡಾಡುವುದನ್ನು ಕಂಡು ಬೈಕ್ ಸವಾರನನ್ನು ನಿಲ್ಲಿಸಿ ಅವನ ಅಂಗಿಯನ್ನು ಬಿಚ್ಚಿಸಿ ಮುಖಕ್ಕೆ ಕಟ್ಟಿಸುವ ಮೂಲಕ ಮಾಸ್ಕ್‌ನ ಅವಶ್ಯಕತೆ ಮತ್ತು ಅದರಿಂದಾಗುವ ಸುರಕ್ಷತೆಯ ಬಗ್ಗೆ ತಿಳಿಹೇಳಿ ಮಾತನಾಡಿ,ಕೊರೊನಾ ವೈರಸ್ ಮಹಾಮಾರಿಯಾಗಿದ್ದು ಇದಕ್ಕೆ ಯಾವುದೇ ಅಧೀಕೃತವಾದ ಮದ್ದಿಲ್ಲ. ಆದ್ದರಿಂದ ಮುಂಜಾಗ್ರತೆಯೊಂದೆ ಇದಕ್ಕಿರುವ ಮದ್ದಾಗಿರುವುದರಿಂದ ನಮ್ಮ ರಕ್ಷಣೆ ನಾವೇ ಮಾಡಿಕೊಳ್ಳಬೇಕೆಂದು ಚೆಕ್‌ಪೋಸ್ಟ್ ಮೂಲಕ ಹೋಗಿ ಬರುವವರ ನಿಲ್ಲಿಸಿ ತಿಳವಳಿಕೆ ಮೂಡಿಸಿದರು.

ಈ ಸಂದರ್ಭದಲ್ಲಿ ತಹಸೀಲ್ ಸಿರಸ್ತೆದಾರ್ ಅಶೋಕ ಸುರಪುರಕರ್,ಭೀಮು ಯಾದವ್ ಹಾಗೂ ಪೊಲೀಸ್ ಸಿಬ್ಬಂದಿಗಳಿದ್ದರು.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

34 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago