ಜಿಲ್ಲಾಧಿಕಾರಿಗಳಿಂದ ಮಹಾಮಾನವತಾವಾದಿಗೆ ಗೌರವ ನಮನ

0
56

ಕಲಬುರಗಿ:  ಮಹಾ ಮಾನವತಾವಾದಿ ಹಾಗೂ ಜಗಜ್ಯೋತಿ ಶ್ರೀ ಬಸವೇಶ್ವರ ಅವರ ಜಯಂತಿ ನಿಮಿತ್ಯ ರವಿವಾರ ನಗರದ ಜಗತ್ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಶರತ್ ಬಿ. ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ ಡೌನ್ ಇರುವುದರಿಂದ 12ನೇ ಶತಮಾನದ ಸಾಮಾಜಿಕ ಹರಿಕಾರನಿಗೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡುವುದರೊಂದಿಗೆ ಜಿಲ್ಲಾಡಳಿತದಿಂದ ಸರಳವಾಗಿ ಜಯಂತಿ ಆಚರಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ, ಶಾಸಕ ಡಾ.ಅಜಯ ಸಿಂಗ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಗೋಪಾಲಕೃಷ್ಣ ಬಿ. ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಅವರು ಸಹ ಮಹಾನ್ ದಾರ್ಶನಿಕನಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here