Monday, July 15, 2024
ಮನೆಬಿಸಿ ಬಿಸಿ ಸುದ್ದಿಆಳಂದ: ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ

ಆಳಂದ: ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ

ಆಳಂದ:  ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ರವಿವಾರ ಜಗಜ್ಯೋತಿ ಬಸವಣ್ಣನವರ 887ನೇ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.
ಶಾಸಕ ಸುಭಾಷ್ ಆರ್ ಗುತ್ತೇದಾರ ಬಸವಣ್ಣನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಬಸವಣ್ಣನವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಸಮಾನತೆಯ ತಳಹದಿಯ ಮೇಲೆ ಬಸವಣ್ಣನವರು ಕಟ್ಟಿದ ಸಮಾಜದಲ್ಲಿ ನಾವು ನೀವು ವಾಸವಾಗಿದ್ದು ಅವರ ಪ್ರಯತ್ನದ ಫಲವನ್ನು ನಾವು ಅನುಭವಿಸುತ್ತಿದ್ದೇವೆ ಅದಕ್ಕಾಗಿ ನಾವು ಬಸವಣ್ಣನವರಿಗೆ ಋಣಿಯಾಗಿರಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಆನಂದರಾವ ಪಾಟೀಲ ಕೊರಳ್ಳಿ, ಮುಖಂಡರಾದ ಅಶೋಕ ಗುತ್ತೇದಾರ, ಶಿವಪುತ್ರಪ್ಪ ಬೆಳ್ಳೆ, ಪ್ರಕಾಶ ಮಾನೆ, ಸಿದ್ದು ಪೂಜಾರಿ, ದಯಾನಂದ ಚೌಲ, ಶರಣು ಕುಮಸಿ ಸೇರಿದಂತೆ ಇತರರು ಇದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular