ಸುರಪುರದಲ್ಲಿ ವಿವಿಧೆಡೆ ವಿಶೇಷವಾಗಿ ಬಸವ ಜಯಂತಿ ಆಚರಣೆ

ಸುರಪುರ: ನಗರದಲ್ಲಿನ ಅನೇಕ ಸಂಘ ಸಂಸ್ಥೆಗಳ ಮುಖಂಡರು ಲಾಕ್‌ಡೌನ್ ಕಾರಣದಿಂದ ಸರಳ ಮತ್ತು ವಿಶೇಷವಾಗಿ ಬಸವ ಜಯಂತಿ ಆಚರಿಸಿದರು.ವೀರಶೈವ ಲಿಂಗಾಯತ ಯುವ ವೇದಿಕೆ ಮುಖಂಡರು ನಗರದಲ್ಲಿನ ಬಡ ಜನತೆಯ ಮನೆ ಬಾಗಿಲಿಗೆ ಹೋಗಿ ಅಕ್ಕಿ ಬೇಳೆ ಬೆಲ್ಲ ಸಕ್ಕರೆ ಹಿಟ್ಟು ಸೇರಿದಂತೆ ಅಗತ್ಯ ವಸ್ತುಗಳ ಕಿಟ್ ವಿತರಿಸಿ ಜಯಂತಿ ಆಚರಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಸೂಗುರೇಶ ವಾರದ್,ಶಿವುಕುಮಾರ್ ಕಲಕೇರಿ,ಚಂದ್ರು ಆವಂಟಿ,ಚಂದ್ರಶೇಖರ ಡೊಣೂರ,ಬಸವರಾಜ ಬೂದಿಹಾಳ, ಬಸಯ್ಯ ಸ್ವಾಮಿ,ಮಂಜುನಾಥ ಸ್ವಾಮಿ,ಆನಂದ ಮಡ್ಡಿ,ಸೂಗು ಸಜ್ಜನ್,ಮಲ್ಲಿಕಾರ್ಜುನ ಸುಬೇದಾರ್,ಭಾಗೇಶ್ ಕಾಳಗಿ,ಲಿಂಗರಾಜ ಶಾಬಾದಿ,ಮಂಜು ತಿಮ್ಮಾಪುರ ಇತರರಿದ್ದರು.

ಕರ್ನಾಟ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ): ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ತಮ್ಮ ಗೃಹ ಕಚೇರಿಯಲ್ಲಿ ಬಸವ ಜಯಂತಿ ಆಚರಿಸಿದರು.ಮೊದಲಿಗೆ ಬಸವಣ್ಣನವರ ಬಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ನೆರವೇರಿಸಿದರು.ಈ ಸಂದರ್ಭದಲ್ಲಿ ವಕೀಲ ಅಪ್ಪಣ್ಣ ಗಾಯಕವಾಡ,ಧರ್ಮರಾಜ ಬಡಿಗೇರ್,ಮಹೇಶ ಯಾದಗಿರಿ,ಶಿವು ಗಾಯಕವಾಡ,ನಿರ್ಮಲಾ ಕ್ರಾಂತಿ ಇತರರಿದ್ದರು.

ಕರ್ನಾಟಕ ಯುವ ರಕ್ಷಣಾ ವೇದಿಕೆ: ನಗರದ ದೇವರಬಾವಿ ಬಳಿಯ ದೇವಸ್ಥಾನದಲ್ಲಿ ಬಸವ ಜಯಂತಿ ಆಚರಿಸಿದರು.ಬಸವಣ್ಣನವರ ಬಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ,ಸಿಹಿ ಅಂಚಿ ಆಚರಿಸಿದರು.ಈ ಸಂದರ್ಭದಲ್ಲಿ ಗುರುನಾಥ ರಡ್ಡಿ,ರಾಜಾ ಪಿಡ್ಡ ನಾಯಕ,ಸಚಿನ್ ಕುಮಾರ ನಾಯಕ,ಅನಿಲ್ ಕುಮಾರ,ಸಚಿನ್ ಕುಮಾರ,ಬಸವರಾಜ,ಆನಂದ,ತಿರುಪತಿ,ವೆಂಕಟೇಶ ಇತರರಿದ್ದರು.

ಪೇಠ ಅಮ್ಮಾಪುರದಲ್ಲಿ ಬಸವ ಜಯಂತಿ: ತಾಲೂಕಿನ ಪೇಠ ಅಮ್ಮಾಪುರ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ೮೮೭ನೇ ಜಯಂತಿ ಆಚರಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಬಸವೇಶ್ವರರ ನಾಮಫಲಕಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಶರಣಪ್ಪ ಕೋಳಿಹಾಳ,ಶರಣಪ್ಪ ಸಾಹುಕಾರ,ಆನಂದ ಸ್ವಾಮಿ,ಗ್ರಾ.ಪಂ ಸದಸ್ಯರಾದ ಮಲ್ಲಿಕಾರ್ಜುನ ರಡ್ಡಿ,ಖಾನೂಲಪ್ಪ ಮೂಕನೂರ,ಚಿದಾನಂದ ಯಳವಾರ,ಮುದ್ಕಪ್ಪ ಕೋಳಿಹಾಳ,ಬಸವರಾಜ ತನಿಖೆದಾರ್,ಗುರುಪಾದಪ್ಪ ಬೇವಿನಗಿಡ,ರಾಮರಡ್ಡಿ ಉಟ್ಕೂರ್,ವೆಂಕಟೇಶ ಬಡಿಗೇರ,ದೇವಿಂದ್ರಪ್ಪ ದೊಡ್ಮನಿ,ಹಣಮಂತ ಬಡಿಗೇರ,ಮಹೇಶ ಶಹಾಬಾದಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

45 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420