ಸುರಪುರ: ನಗರದ ತಹಸೀಲ್ದಾರ್ ಕಚೇರಿಯಲ್ಲಿ ವಿಶ್ವಗುರು ಬಸವಣ್ಣನವರ ೮೮೭ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ಬೆಳಿಗ್ಗೆ ೧೦ ಗಂಟೆಗೆ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಬಸವಣ್ಣನವರ ಬಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.
ನಂತರ ಮಾತನಾಡಿದ ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನ,ಬಸವಣ್ಣನವರ ವಚನಗಳು ವಿಶ್ವಕ್ಕೆ ಮಾದರಿ ಸಂದೇಶವನ್ನು ನೀಡಿದವುಗಳಾಗಿವೆ.ಅವರು ತಮ್ಮ ಬದುಕಿನಲ್ಲಿ ಅನುಭವಿಸಿದ ನೈಜ ಘಟನೆಗಳನ್ನೆ ವಚನಗಳ ರೂಪದಲ್ಲಿ ರಚಿಸಿದ್ದಾರೆ.ಅವರು ಹೇಗೆ ಬದುಕಿದರೊ ಹಾಗೆಯೇ ತಮ್ಮ ಸಂದೇಶವನ್ನಿ ವಿಶ್ವಕ್ಕೆ ನೀಡಿದ ಮಹಾನ್ ಪುರುಷರಾಗಿದ್ದಾರೆ ಎಂದರು.
ನಗರ ಯೊಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸೂಗುರೇಶ ವಾರದ್ ಮಾತನಾಡಿ,ಈ ವರ್ಷ ಕೊರೊನಾ ವೈರಸ್ ಕಾರಣ ದಿಂದ ಜಯಂತಿಯನ್ನು ಸರಳವಾಗಿ ಆಚರಿಸಬೇಕಿದೆ.ಎಲ್ಲರು ನಮ್ಮ ನಮ್ಮ ಮನೆಗಳಲ್ಲಿಯೂ ಸರಳವಾಗಿ ಜಯಂತಿ ಆಚರಿಸಿ ಕೊರೊನಾ ನಿರ್ಮೂಲನೆಯಾಗಲೆಂದು ಬಸವಾದಿ ಶರಣರಲ್ಲಿ ಪ್ರಾರ್ಥಿಸೋಣ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥ ಜಾಲಹಳ್ಳಿ,ಸಂಗಣ್ಣ ಎಕ್ಕೆಳ್ಳಿ, ಜಗದೀಶ ಪಾಟೀಲ್,ಚಂದ್ರಶೇಖರ ಡೊಣೂರ,ಆನಂದ ಮಡ್ಡಿ,ಶರಣು ಅರಕೇರಿ,ಚಂದ್ರು ಆವಂಟಿ, ಬಸ್ಸಯ್ಯ ಸ್ವಾಮಿ,ಸಿದ್ದಣ್ಣಗೌಡ ಹೆಬ್ಬಾಳ,ಕುಮಾರ ಹೂಗಾರ ಹಾಗೂ ತಹಸೀಲ್ ಸಿಬ್ಬಂದಿಗಳಾದ ಕೊಂಡಲ ನಾಯಕ, ಸೋಮಶೇಖರ ನಾಯಕ,ಪ್ರದೀಪ ನಾಲ್ವಡೆ,ಸೋಮಶೇಖರ ಪತ್ತಾರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…