ಮೂರು ತಿಂಗಳ ಪಿ.ಎಫ್ ವಂತಿಗೆಯನ್ನು ಕೇಂದ್ರ ಸರಕಾರವೇ ಭರಿಸುವುದು: ಸುಪ್ರತಿಕ ದಾಶ

ಕಲಬುರಗಿ: ಒಂದು ನೂರು ಅಥವಾ ಅದಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಕಾರ್ಖಾನೆ ಮತ್ತು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಪಿ.ಎಪ್ ವಂತಿಗೆಯನ್ನು ಕೇಂದ್ರ ಸರಕಾರವೇ ಭರಿಸಲಿದೆ ಎಂದು ಕಲಬುರಗಿ ಪ್ರಾದೇಶಿಕ ಪಿ.ಎಪ್ ಕಚೇರಿ ಸಹಾಯಕ ಆಯುಕ್ತ ಸುಪ್ರತಿಕ ದಾಶ ತಿಳಿಸಿದ್ದಾರೆ.

90 ಪ್ರತಿಶತ ಉದ್ಯೋಗಿಗಳ ತಿಂಗಳ ವೇತನ 15,000/- ರೂ. ಗಿಂತ ಕಡಿಮೆ ಇರಬೇಕು, 100 ಪ್ರತಿಶತ ಉದ್ಯೋಗಿಗಳ ಕೆ.ವೈ.ಸಿ (KYC-Aadhar) ಮತ್ತು ಉದ್ಯೋಗದಾತರ ಪೂರ್ಣ ಮಾಹಿತಿ ಎಲೆಕ್ಟ್ರಾನಿಕ್ ಮುಖಾಂತರ (ಪಾರ್ಮ- 5ಎ) ನಮೂದಿಸಿರಬೇಕು. ಇಂತಹ ಉದ್ಯೋಗಿಗಳ ವೇತನದ ಶೇ. 24 ರಷ್ಟು ಪಿ.ಎಪ್ ವಂತಿಗೆಯನ್ನು ಕೇಂದ್ರ ಸರಕಾರ ಮೂರು ತಿಂಗಳವರೆಗೆ ಪಾವತಿಸಲಿದೆ.

ಪರಿಹಾರ ಪ್ರಕ್ರಿಯೆ ಮತ್ತು ಕಾರ್ಯವಿಧಾನಗಳನ್ನು ಒಳಗೊಂಡ ತಂತ್ರಾಂಶವನ್ನು ಇಪಿಎಪ್ಓ ಎಲೆಕ್ಟ್ರಾನಿಕ್ ಚಲನ್-ಕಮ್-ರಿಟರ್ನ (ಇ.ಸಿ.ಆರ್) ವ್ಯವಸ್ಥೆ ಜಾರಿಗೊಳಿಸಿದ್ದು. ಈ ವ್ಯವಸ್ಥೆಯು ಸಂಬಂಧಪಟ್ಟ ಕಾರ್ಖಾನೆಗಳು ಮತ್ತು ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಪರಿಹಾರವನ್ನು ಪಡೆಯಲು ಅನುಕೂಲವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಇ.ಪಿ.ಎಪ್.ಓ ಕೋವಿಡ-19 ಟ್ಯಾಬ್‌ನಲ್ಲಿ ಗಮನಿಸಬಹುದು ಎಂದು ತಿಳಿಸಿದ್ದಾರೆ.

ಈಗಾಗಲೇ ಭವಿಷ್ಯ ನಿಧಿ ಕಚೇರಿಯ ಮುಖಾಂತರ ಅರ್ಹ ಉದ್ಯೋಗದಾತರಿಗೆ ಇ-ಮೇಲ್ ಮೂಲಕ ಸಂದೇಶವನ್ನು ರವಾನಿಸಲಾಗಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕಾರ್ಯಾಲಯದ ದೂರವಾಣಿ ಸಂಖ್ಯೆ 08472-283204/273205 ಮತ್ತು ಇ-ಮೇಲ್ ro.gulbarga@epfindia.gov.in   ಸಂಪರ್ಕಿಸಬಹುದು.

emedialine

Recent Posts

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

1 hour ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

2 hours ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

15 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

18 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

22 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420