ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ವೈರಸ್ (ಕೋವಿಡ್-19) ಹರಡುವಿಕೆಯನ್ನು ತಡೆಗಟ್ಟಲು ಅನುಕೂಲವಾಗುವಂತೆ ಮುನ್ನೇಚ್ಚರಿಕೆಯ ಕ್ರಮವಾಗಿ ವೈದ್ಯರ ಶಿಫಾರಸ್ಸು ಇಲ್ಲದೇ ಮೆಡಿಕಲ್ ಸ್ಟೋರ್ಸ್ಗಳಿಂದ (Antibiotics, Antipyreties and Anti Fever) ಔಷಧಿ ಖರೀದಿಸುವ ಸಾರ್ವಜನಿಕರ ಮಾಹಿತಿ ಪಡೆಯಲು ತಲಾ ಓರ್ವ ನೋಡಲ್ ಅಧಿಕಾರಿ ಹಾಗೂ ಸಹಾಯಕ ನೋಡಲ್ ಅಧಿಕಾರಿಯನÀ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯ ಸಂಗಪ್ಪ ಗಾರಂಪಳ್ಳಿ ಇವರನ್ನು ನೋಡಲ್ ಅಧಿಕಾರಿಗಳೆಂದು ಹಾಗೂ ಪ್ರಾಧಿಕಾರದ ವ್ಯವಸ್ಥಾಪಕ ರವೀಂದ್ರರೆಡ್ಡಿ ಇವರನ್ನು ಸಹಾಯಕ ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಿ ಡಿ.ಸಿ. ಅವರು ಹೊರಡಿಸಲಾಗಿದೆ. ನೇಮಕ ಮಾಡಲಾದ ನೋಡಲ್ ಅಧಿಕಾರಿ ಪ್ರತಿ ಔಷಧ ಅಂಗಡಿಗಳಿಂದ (Antibiotics, Antipyreties and Anti Fever) ಔಷಧಿ ಖರೀದಿಸುವ ಸಾರ್ವಜನಿಕರ ವಿವರಗಳನ್ನು ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸಂಬಂಧಪಟ್ಟಂತೆ ಆಯಾ ತಾಲೂಕಿನ ತಹಶೀಲ್ದಾರರಿಂದ ಹಾಗೂ ಕಲಬುರಗಿ ಔಷಧ ನಿಯಂತ್ರಣ ಇಲಾಖೆಯ ಸಹಾಯಕ ಔಷಧ ನಿಯಂತ್ರಕರು-01 ಹಾಗೂ 02 ಇವರಿಂದ ನಿಗದಿತ ನಮೂನೆಯಲ್ಲಿ ಮಾಹಿತಿ ಪಡೆದು ಕ್ರೋಢೀಕರಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
ಸಾಂಕ್ರಾಮಿಕ ರೋಗ ಕಾಯ್ದೆ 1897, ಕರ್ನಾಟಕ ಕೋವಿಡ್-19 ರೆಗ್ಯುಲೇಶನ್ ಉಪ ಕಲಂ (24) 2020 ನಿಯಮ 12ರಲ್ಲಿ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 25, 26 ಮತ್ತು 30 ರಡಿ ಸಿ.ಆರ್.ಪಿ.ಸಿ. ಕಾಯ್ದೆ 1973 ರ ಕಲಂ 133ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಡಿ.ಸಿ. ಅವರು ಈ ಆದೇಶ ಹೊರಡಿಸಿದ್ದಾರೆ.
ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…
ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…