ಹೊರರಾಜ್ಯದ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ. ದರದಂತೆ ಪಡಿತರ ವಿತರಣೆ

ಕಲಬುರಗಿ: ಕೇಂದ್ರ ಸರ್ಕಾರದ ನಿಯಮದಂತೆ ಕರ್ನಾಟಕ ರಾಜ್ಯದವರಲ್ಲದ ಹೊರರಾಜ್ಯಗಳಲ್ಲಿ ವಾಸಿಸುವ ಪಡಿತರ ಚೀಟಿದಾರರಿಗೆ ಉಚಿತವಾಗಿ ಪಡಿತರ ಆಹಾರಧಾನ್ಯಗಳನ್ನು ವಿತರಿಸಲು ಅವಕಾಶ ಇರುವುದಿಲ್ಲ. ಆದರೆ ಎನ್.ಎಫ್.ಎಸ್.ಎ. ದರದಂತೆ ಕರ್ನಾಟಕ ರಾಜ್ಯದವರಲ್ಲದ ಹೊರರಾಜ್ಯದ ಪ್ರತಿ ಎಎವೈ ಪಡಿತರ ಚೀಟಿದಾರರಿಗೆ ಪ್ರತಿ ಕೆ.ಜಿ. ಅಕ್ಕಿಗೆ 3 ರೂ. ದರದಂತೆ 35 ಕೆ.ಜಿ ಅಕ್ಕಿ ಹಾಗೂ ಆದ್ಯತಾ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ. ಅರ್ಹ ಹೊರರಾಜ್ಯದ ಪಡಿತರ ಚೀಟಿದಾರರು ಇದರ ಸದುಪಯೋಗ ಪಡೆಯಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.

ಹೊರರಾಜ್ಯದ ಪಡಿತರ ಪಡೆಯುವ ಪಡಿತರ ಚೀಟಿದಾರರ ಚೀಟಿ ಸಂಖ್ಯೆಯನ್ನು ನ್ಯಾಯಬೆಲೆ ಅಂಗಡಿಯಲ್ಲಿನ ತಂತ್ರಾಂಶದಲ್ಲಿ ನಮೂದಿಸಿ, ಕೇಂದ್ರ ಸರ್ಕಾರದ ದತ್ತಾಂಶದಲ್ಲಿ ಈ ಮಾಹಿತಿಯನ್ನು ಪರಿಶೀಲಿಸಿ, ನಂತರ ಪಡಿತರ ಚೀಟಿದಾರರು ಸದರಿ ಮಾಹೆಯಲ್ಲಿ ಪಡಿತರ ಎತ್ತುವಳಿ ಮಾಡಲಾಗಿದೆಯೇ ಅಥವಾ ಇಲ್ಲವೆಂಬುದನ್ನು ಪರಿಶೀಲಿಸಲಾಗುತ್ತದೆ. ಪಡಿತರವನ್ನು ಎತ್ತುವಳಿ ಮಾಡದೇ ಇದ್ದಲ್ಲಿ ರಾಜ್ಯದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಿಸಲು ಅನುಮತಿಯನ್ನು ನೀಡಲಾಗುತ್ತದೆ. ಮೂಲ ಸ್ಥಳದಲ್ಲಿ ಪಡಿತರ ಎತ್ತುವಳಿ ಮಾಡಿದ್ದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆಗೆ ಅವಕಾಶ ಇರುವುದಿಲ್ಲ. ಪಡಿತರ ಪಡೆಯಲು ಅರ್ಹರಿರುವ ಪಡಿತರ ಚೀಟಿದಾರರು ತಮ್ಮ ಆಧಾರ್ ದೃಢೀಕೃತ ಬರಳಚ್ಚು ಬಯೋಮೆಟ್ರಿಕ್ ಅಥವಾ ಓಟಿಪಿ ಮೂಲಕವೇ ಪಡಿತರ ಪಡೆಯಬೇಕು.

ಹೊರ ರಾಜ್ಯದ ಕಾರ್ಮಿಕರು/ಕುಶಲಕರ್ಮಿಗಳು ಕಾರ್ಯನಿರ್ವಹಿಸುವ ಕಾರ್ಖಾನೆಗಳು ಅಥವಾ ಸಂಸ್ಥೆಗಳ ಮಾಲೀಕರು, ನ್ಯಾಯಬೆಲೆ ಅಂಗಡಿ ಮಾಲೀಕರು ರಾಜ್ಯದ ನ್ಯಾಯಬೆಲೆ ಅಂಗಡಿಗಳಿಂದಲೇ ಆಹಾರಧಾನ್ಯವನ್ನು ಪಡೆಯಬೇಕೆಂದು ಕಾರ್ಮಿಕರು/ಕುಶಲಕರ್ಮಿರಲ್ಲಿ ತಿಳುವಳಿಕೆ ಮೂಡಿಸಬೇಕು. ಇದಲ್ಲದೇ ಹೊರರಾಜ್ಯದ ಪಡಿತರ ಚೀಟಿದಾರರು ಪಡಿತರ ಪಡೆಯಲು ಗ್ರಾಮ ಪಂಚಾಯತಿ ಮತ್ತು ಸ್ಥಳಿಯ ಸಂಸ್ಥೆಗಳ ಮೂಲಕ ತಿಳುವಳಿಕೆ ಮೂಡಿಸಬೇಕು.

ಕೇಂದ್ರ ಸರ್ಕಾರವು “ಒಂದು ದೇಶ ಒಂದು ಪಡಿತರ ಚೀಟಿ” ಯೋಜನೆಯಡಿ ಹೊರ ರಾಜ್ಯಗಳಲ್ಲಿ ವಾಸಿಸುವ ಪಡಿತರ ಚೀಟಿದಾರರಿಗೆ ಮೂಲ ರಾಜ್ಯದ ಪಡಿತರ ಚೀಟಿಯ ಆಧಾರದ ಮೇಲೆ ಅವರು ವಾಸಿಸುತ್ತಿರುವ ರಾಜ್ಯಗಳಲ್ಲಿನ ನ್ಯಾಯಬೆಲೆ ಅಂಗಡಿಗಳ ಮೂಲಕ Portability ಅಡಿ ಪಡಿತರ ವಿತರಣೆ ಮಾಡಲು ಅಗತ್ಯವಿರುವ ಆಹಾರಧಾನ್ಯವನ್ನು ರಾಜ್ಯಕ್ಕೆ ಬಿಡುಗಡೆಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ರೈತರಿಗೆ ಪಲ್ಸ್ ಮ್ಯಾಜಿಕ್ ವಿತರಣೆ

ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿಯಲ್ಲಿ ಪಿಎಮ್ ಕಿಸಾನ್ ಸಮ್ಮಾನ್ ನಿಧಿ 18ನೇ ಕಂತು ಬಿಡುಗಡೆ ಕಾರ್ಯಕ್ರಮದ ನೇರ ಪ್ರಸಾರದ…

2 hours ago

ಗುಡ್ಡಾಪುರ ದಾನಮ್ಮ ದೇವಿಯ ತೊಟ್ಟಿಲ

ಕಲಬುರಗಿ: ಶಿವಯೋಗ ಸಾಧನೆ, ದಾಸೋಹ, ಕಾಯಕ ನಿಷ್ಠೆ, ಸತ್ಯ- ಧರ್ಮ-ನ್ಯಾಯ ಮೊದಲಾದ ಅಷ್ಟಗುಣಗಳನ್ನು ಅಳವಡಿಸಿಕೊಂಡು ಬದುಕಿದ ಶರಣೆ ಗುಡ್ಡಾಪೂರ ದಾನಮ್ಮ. 12…

2 hours ago

ಅ.8 ರಂದು ದಸರಾ ಕಾವ್ಯ ಸಂಭ್ರಮ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಅ.8 ರಂದು ಇಳಿಹೊತ್ತು 4.15 ಕ್ಕೆ ನಗರದ ಕನ್ನಡ ಭವನದ ಸಾಹಿತ್ಯ…

2 hours ago

ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ 16ನೇ ಸಂಸ್ಥಾಪನಾ ದಿನಾಚರಣೆಯನ್ನು 22ನೇ ನವೆಂಬರ್ 2024 ರಂದು ರಾಯಚೂರು ಮುಖ್ಯ ಆವರಣದಲ್ಲಿ…

2 hours ago

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

7 hours ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420