ಸುರಪುರ: ಸುರಪುರ ನಗರದ ಕುಂಬಾರಪೇಟ ಬಳಿಯಲ್ಲಿ ೨೦ ದಿನಗಳ ಬಾಣಂತಿಯ ಕುಟುಂಬವೊಂದು ಗಂಡ ಮತ್ತು ಮಕ್ಕೊಳ್ಳೊಂದಿಗೆ ವಾಸಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು, ಅವರ ಆರೋಗ್ಯ ತಪಾಸಣೆಗಾಗಿ ತಾಲೂಕು ಆಸ್ಪತ್ರೆ ವೈದ್ಯರಿಗೆ ತಿಳಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,ಈ ಕುಟುಂಬಕ್ಕೆ ಎಲ್ಲಾ ರೀತಿಯ ಅನೂಕೂಲ ಕಲ್ಪಿಸುವಂತೆ ಈಗಾಗಲೆ ತಾಲೂಕು ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾದೀಶ ಪ್ರಕಾಶ ಅರ್ಜುನ ಬನಸೋಡೆ ತಿಳಿಸಿದರು.
ನಗರದ ತಾಲೂಕು ಆಸ್ಪತ್ರೆಯಲ್ಲಿದ್ದ ಹೈದರಾಬಾದ್ ಮೂಲದ ಶಾಂತಕುಮಾರ್ ಜ್ಯೋತಿಬಾಯಿ ಕುಟುಂಬವನ್ನು ಭೇಟಿ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುಟುಂಬವು ಲಾಕ್ ಡೌನಿಂದಾಗಿ ತುಂಬಾ ಸಂಕ್ಷಷ್ಟ ಅನುಭವಿಸಿತ್ತು. ಹೆರಿಗೆಗೆಂದು ಮಹಿಳೆಯು ತವರು ಮನೆಗೆ ಬಂದಿದ್ದು ಹೆರಿಗೆಯಾಗಿ ಕೆಲವು ದಿನಗಳ ವರೆಗೂ ತಂದೆಯ ಮನೆಯಲ್ಲಿಯೆ ಇದ್ದರು ಕೆಲವು ಕೌಟುಂಬಿಕ ಕಾರಣಗಳಿಂದ ತವರು ಮನೆ ಯವರೊಡನೆ ಮನಸ್ತಾಪವಾಗಿ ತವರು ಮನೆಯಿಂದ ಹೊರಗೆ ಬಂದು ಗಂಡನೊಂದಿಗೆ ಅಲ್ಲಿಯೆ ಇರುವ ನೀರು ಶುದ್ಧಿಕರಣ ಘಟಕದಲ್ಲಿ ವಾಸವಾಗಿದ್ದರು. ಆಸ್ಪತ್ರೆಯಿಂದ ತೆರಳಿದ ನಂತರ ಊಳಿದುಕೊಳ್ಳಲು ವ್ಯವಸ್ಥೆಯನ್ನುಮಾಡಲು ತಿಳಿಸಲಾಗಿದೆ ಹಾಗೂ ವೈದ್ಯರೊಂದಿಗೆ ತಾಯಿ ಮತ್ತು ಮಗುವಿನ ಆರೋಗ್ಯದ ಕುರಿತು ಮಾಹಿತಿ ಪಡೆಯಲಾಗಿದೆ ಎಂದು ತಿಳಿಸಿದರು.
ಸುರಪುರ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾದೀಶೆ ತಯ್ಯಬಾ ಸುಲ್ತಾನ, ಪ್ರಧಾನ ಸಿವಿಲ್ ನ್ಯಾಯಾದೀಶ ಚಿದಾನಂದ ಬಡಗೇರ, ಹೆಚ್ಚುವರಿ ಸಿವಿಲ್ ನ್ಯಾಯಾದೀಶ ಅಮರನಾಥ ಬಿ.ಎನ್ ಹಾಗೂ ತಹಶಿಲ್ದಾರ ನಿಂಗಣ್ಣ ಬಿರಾದರ, ತಾಲೂಕು ಆರೋಗ್ಯಾಧಿಕಾರಿ, ಡಾ.ಆರ್.ವಿ.ನಾಯಕ, ಶಿಶು ಅಭಿವೃದ್ಧಿ ಅಧಿಕಾರಿ ಲಾಲಸಾಬ ಪೀರಾಪುರ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…