ಚಿಂಚೋಳಿ: ಕೊರೊನಾ ತಡೆಯುವಲ್ಲಿ ಸರ್ಕಾರದೊಡಗೂಡಿ ಸ್ವಯಂ ಸೇವಕರಾಗಿ ಸಹಕರಿಸಲು ಸಂಘ, ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಇಂದು ಚಿಂಚೋಳಿಯ ತಹಸಿಲ್ದಾರ್ ಅರುಣಕುಮಾರ ಕುಲಕರ್ಣಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಕರೆದ ಮಹಾಮಾರಿ ಕೊರೊನಾ ದಿನದಿನಕ್ಕೆ ತನ್ನ ಅಟ್ಟಹಾಸ ಮೆರೆದು ಮಾನವ ಜನಾಂಗಕ್ಕೆ ನಡುಕ ಹುಟ್ಟಿಸಿದೆ ಇದನ್ನು ತಡೆಯುವಲ್ಲಿ ಸರ್ಕಾರ ಅಧಿಕಾರಿಗಳು ಹಗಲಿರುಳೆನ್ನದೆ ಸೇವೆ ಸಲ್ಲಿಸುತ್ತಿದ್ದಾರೆ ಅದರೊಂದಿಗೆ ಸರ್ಕಾರೆತರ ಸಂಘ, ಸಂಸ್ಥೆಗಳು ಸರ್ಕಾರದ ಅನುದಾನವಲ್ಲದೆ ಇಂತಹ ಮಹಾಮಾರಿ ಕೊರೊನಾ ಪರಿಸ್ಥಿತಿಯಲ್ಲಿ ಸ್ವಯಂ ಪ್ರೇರಿತರಾಗಿ ಸರ್ಕಾರದೊಂದಿಗೆ ಕೈಜೋಡಿಸಿ ಸೇವೆ ಮಾಡಿ ಮಾನವೀಯತೆ ಮೆರೆಯಬೇಕೆಂದು ಮನವಿ ಮಾಡಿ, ಕೈ ಜೊಡಿಸಲು ಸರ್ಕಾರದ ವೆಬ್ ಸೈಟ್ www.karnatakafightscorona.org ನಲ್ಲಿ ತಮ್ಮ ಸಂಘ, ಸಂಸ್ಥೆಗಳ ನೊಂದಣಿ ಮಾಡಬೇಕೆಂದು ತಿಳಿಸಿದರು.
ಈ ವೇಳೆಯಲ್ಲಿ ಪ್ರಭಾರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಪ್ರೇಮಿಳಾ, ಸಂಸ್ಥೆಗಳ ಮುಖಂಡರಾದ ಮಾರುತಿ ಗಂಜಗಿರಿ, ಶಾಮರೆಡ್ಡಿ ಸುಲೇಪೇಟ್, ಶಿವುಕುಮಾರ ಕೊಳ್ಳುರ, ಅಬ್ದುಲ್ ಹಾಫಜ್, ಶುಕುರ್ ಪಟೇಲ್, ರಾಜಕುಮಾರ ಕೊಳ್ಳುರ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…