ಕಲಬುರಗಿ ಡಿಸಿ ವರ್ಗಾವಣೆಗೆ ಜೆಡಿಎಸ್ ಖಂಡನೆ

0
65

ಕಲಬುರಗಿ: ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿಗಳಾದ ಶ್ರೀ ಬಿ ಶರತ್ ಅವರನ್ನು ವರ್ಗಾವಣೆಗೊಳಿಸಿರುವುದು ತೀವ್ರವಾಗಿ ಖಂಡಿಸುತ್ತೇವೆ ಮೊಟ್ಟ ಮೊದಲ ಬಾರಿಗೆ ಭಾರತ ದೇಶದಲ್ಲಿಯೇ ಕಲಬುರ್ಗಿಯಲ್ಲಿ ಮಹಾಮಾರಿ ಕೊರೊನಾವನ್ನು ಯಶಸ್ವಿಯಾಗಿ ಹತೋಟಿಗೆ ತರುವಲ್ಲಿ ಜಿಲ್ಲಾಧಿಕಾರಿಗಳು ಶ್ರಮಿಸಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ದೇವೇಗೌಡ ತೆಲ್ಲೂರ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಮತ್ತು ರಾಜ್ಯದಾದ್ಯಂತ ಮತ್ತು ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಪ್ರಶಂಸೆ ಕೂಡ ವ್ಯಕ್ತಪಡಿಸಿದ್ದರೂ ಜಿಲ್ಲೆಯಾದ್ಯಂತ ಅವರು ಹೆಸರು ಹೆಚ್ಚಾಗಿ ಕೇಳಿ ಬರುತ್ತಿರುವುದರಿಂದ ಸಹಿಸಲಾಗದೆ ಭಾರತೀಯ ಜನತಾ ಪಕ್ಷದ ಸರ್ಕಾರ ದಿಢೀರನೆ ವರ್ಗಾವಣೆ ಮಾಡಿರುವುದು ನಮ್ಮ ಜಿಲ್ಲೆಯ ಜನತೆಗೆ ನೋವು ತಂದುಕೊಟ್ಟಿದೆ ಇದರಲ್ಲಿ ರಾಜಕೀಯ ಬೆರೆಸಲಾಗಿದೆ ಭಾರತೀಯ ಜನತಾ ಪಕ್ಷ ಇವರ ಈ ವರ್ಗಾವಣೆಯ ಆದೇಶವನ್ನು ಕೂಡಲೇ ರದ್ದುಗೊಳಿಸಬೇಕೆಂದು ತೆಲ್ಲೂರ ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here