ಕಲಬುರಗಿ: ಸಿಡಿಲಿಗೆ ಯುವಕ ಸೇರಿ ಮೂವರು ಬಲಿ

0
296

ಕಲಬುರಗಿ: ಇಲ್ಲಿನ ಚಿಂಚೋಳಿ ತಾಲ್ಲೂಕಿನ ಅಲ್ಲಾಹಪುರ ಗ್ರಾಮದ ಹತ್ತಿರ ಓರ್ವ ಕೂಲಿ ಕಾರ್ಮಿಕನಿಗೆ ಸಿಡಿಲು ಬಡೆದು ಸಾವನಪ್ಪಿರುವ ಘಟನೆ ಇಂದು ಸಂಜೆ ವೇಳೆ ನಡೆದಿದೆ.

ಅನೀಲ್ ಚಂದ್ರಶೇಟಿ (23) ಸಿಡಿಲಿಗೆ ಬಲಿಯಾದ ಯುವಕ, ಅನೀಲ್ ಕೊಡ್ಲಿ ಗ್ರಾಮದ ನಿವಾಸಿಯಾಗಿದ್ದು, ಇಂದು ಸಂಜೆ ವೇಳೆಯಲ್ಲಿ ಮಳೆ ಮತ್ತು ಸಿಡಿಲಿನ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ ಸಂದರ್ಭದಲ್ಲಿ ಸಿಡಿಲು ಬಡೆದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಸ್ಥಳಕ್ಕೆ ಚಿಂಚೋಳಿ ತಹಶೀಲ್ದಾರ ಮತ್ತು ಶಾಸಕ ಅವಿನಾಶ್ ಜಾಧವ್ ಅವರು ಭೇಟಿ ನೀಡಿದ್ದು, ಈ ವೇಳೆಯಲ್ಲಿ ರಟಕಲ್ ಪೊಲೀಸ್ ಠಾಣೆಯ ಪಿ.ಎಸ್.ಐ ಶಿವಶಂಕರ್ ಸುಬೇದಾರ್, ಸಿಪಿಐ ವಿಜಯ ಬಿ ಮಠಪತಿ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಇದೇ ರೀತಿ ಜಿಲ್ಲೆಯ ಕಮಲಾಪುರ ತಾಲೂಕಿನ ಭುಯ್ಯಾಂರ ಗ್ರಾಮದ ಘಟನೆಯಲ್ಲಿ ಸುಭಾಷ್ ಹಳಕೇರಿ 35 ಕುಪ್ಪಣ್ಣ ನವಲೆ 58 ಸಿಡಿಲಿಗೆ ಬಲಿಯಾಗಿದ್ದಾರೆ.

ಇವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here