ಕಲಬುರಗಿ: ಇಲ್ಲಿನ ಚಿಂಚೋಳಿ ತಾಲ್ಲೂಕಿನ ಅಲ್ಲಾಹಪುರ ಗ್ರಾಮದ ಹತ್ತಿರ ಓರ್ವ ಕೂಲಿ ಕಾರ್ಮಿಕನಿಗೆ ಸಿಡಿಲು ಬಡೆದು ಸಾವನಪ್ಪಿರುವ ಘಟನೆ ಇಂದು ಸಂಜೆ ವೇಳೆ ನಡೆದಿದೆ.
ಅನೀಲ್ ಚಂದ್ರಶೇಟಿ (23) ಸಿಡಿಲಿಗೆ ಬಲಿಯಾದ ಯುವಕ, ಅನೀಲ್ ಕೊಡ್ಲಿ ಗ್ರಾಮದ ನಿವಾಸಿಯಾಗಿದ್ದು, ಇಂದು ಸಂಜೆ ವೇಳೆಯಲ್ಲಿ ಮಳೆ ಮತ್ತು ಸಿಡಿಲಿನ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ ಸಂದರ್ಭದಲ್ಲಿ ಸಿಡಿಲು ಬಡೆದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಚಿಂಚೋಳಿ ತಹಶೀಲ್ದಾರ ಮತ್ತು ಶಾಸಕ ಅವಿನಾಶ್ ಜಾಧವ್ ಅವರು ಭೇಟಿ ನೀಡಿದ್ದು, ಈ ವೇಳೆಯಲ್ಲಿ ರಟಕಲ್ ಪೊಲೀಸ್ ಠಾಣೆಯ ಪಿ.ಎಸ್.ಐ ಶಿವಶಂಕರ್ ಸುಬೇದಾರ್, ಸಿಪಿಐ ವಿಜಯ ಬಿ ಮಠಪತಿ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಇದೇ ರೀತಿ ಜಿಲ್ಲೆಯ ಕಮಲಾಪುರ ತಾಲೂಕಿನ ಭುಯ್ಯಾಂರ ಗ್ರಾಮದ ಘಟನೆಯಲ್ಲಿ ಸುಭಾಷ್ ಹಳಕೇರಿ 35 ಕುಪ್ಪಣ್ಣ ನವಲೆ 58 ಸಿಡಿಲಿಗೆ ಬಲಿಯಾಗಿದ್ದಾರೆ.
ಇವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…