ಬಿಸಿ ಬಿಸಿ ಸುದ್ದಿ

ಮದಗುಣಕಿ: ಅಗ್ನಿ ಅವಘಡ ಶಾಸಕ ಗುತ್ತೇದಾರರಿಂದ ಪರಿಹಾರ

ಆಳಂದ: ತಾಲೂಕಿನ ಮಾದನಹಿಪ್ಪರ್ಗಾ ಹೋಬಳಿಯ ಮದಗುಣಕಿ ಗ್ರಾಮದಲ್ಲಿ ಇತ್ತೀಚಿಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಸುಟ್ಟು ಕರಕಲಾದ ಮನೆಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರ ನೀಡಿದರು.
ಮದಗುಣಕಿಯ ಹಣಮಂತ ಸಣಮನಿ ಎಂಬುವವರಿಗೆ ಸೇರಿದ ಮನೆ ಆಕಸ್ಮಿಕ ಅಗ್ನಿ ಅವಘಡಕ್ಕೆ ಬೆಂಕಿಗೆ ಆಹುತಿಯಾಗಿತ್ತು. ಮನೆಯಲ್ಲಿದ್ದ ದಿನಸಿ ಪದಾರ್ಥ, ಬಟ್ಟೆ, ಬೆಳೆದ ಬೆಳೆ ಸೇರಿ ಹಲವು ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದವು ಇದರಿಂದ ಕುಟುಂಬದವರು ತೀವ್ರ ತೊಂದರೆ ಅನುಭವಿಸುತ್ತಿದ್ದರು.

ವಿಷಯ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಆಹಾರ ಪದಾರ್ಥಗಳು ಸೇರಿದಂತೆ ಅನೇಕ ವಸ್ತುಗಳನ್ನು ನೀಡಿ ವೈಯಕ್ತಿಕವಾಗಿ 5 ಸಾವಿರ ರೂ. ಪರಿಹಾರ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಗುರುಶಾಂತ ಪಾಟೀಲ ನಿಂಬಾಳ ಹೊಸ ಪತ್ರಾಗಳನ್ನು ಖರೀದಿಸಲು 10 ಸಾವಿರ ನೀಡಿದರು. ಸಧ್ಯ ಸಂತ್ರಸ್ತ ಕುಟುಂಬದವರಲ್ಲಿ ಸಂತಸ ಮನೆ ಮಾಡಿದ್ದು ಜನಪ್ರತಿನಿಧಿಗಳ ಸಹಕಾರದಿಂದ ಶೀಘ್ರದಲ್ಲಿ ವಾಸಿಸಲು ಸೂರು ಸಿಗುವಂತಾಗಿದೆ ಎಂದು ಹಣಮಂತ ಸಣಮನಿ ತಿಳಿಸಿದ್ದಾರೆ.

ಶಾಸಕ ಸುಭಾಷ್ ಆರ್ ಗುತ್ತೇದಾರ ಮಾತನಾಡಿ, ರಾಜ್ಯ ವಿಪತ್ತು ಪರಿಹಾರ ನಿಧಿಯ ಅಡಿಯಲ್ಲಿ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ಇನ್ನೂ ಹೆಚ್ಚಿನ ಸಹಾಯ ಮಾಡಲು ಸರ್ಕಾರಕ್ಕೆ ಕೋರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಗುರುಶಾಂತ ಪಾಟೀಲ ನಿಂಬಾಳ, ಮುಖಂಡರಾದ ಶರಣಬಸಪ್ಪ ಪಾಟೀಲ, ಮಲ್ಲಣ್ಣ ನಾಗೂರೆ, ಮಲ್ಲಿನಾಥ ಪರೇಣಿ, ಶಿವಲಿಂಗಪ್ಪ ಜಮಾದಾರ, ಬಸವರಾಜ ಶಾಸ್ತ್ರೀ, ಪಿಎಸ್‍ಐ ಇಂದುಮತಿ ಸೇರಿದಂತೆ ಇತರರು ಇದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

6 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

18 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

19 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

20 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

20 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

20 hours ago