ಬಿಸಿ ಬಿಸಿ ಸುದ್ದಿ

ಪೊಲೀಸರ ಶ್ರಮಕ್ಕೆ ಶಾಸಕರ ಖರ್ಗೆ ಶ್ಲಾಘನೆ: ರಕ್ಷಣಾ ಸಾಮಗ್ರಿ ಹಸ್ತಾಂತರ

ಕಲಬುರಗಿ: ಕೊರೋನಾ ರೋಗದ ವಿರುದ್ದ ಹೋರಾಡುತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ರಕ್ಷಾಕವಚಗಳನ್ನು ಮಾನ್ಯ ಶಾಸಕರಾದ ಪ್ರಿಯಾಂಕ್ ಖರ್ಗೆ ಇಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಕೊರೋನಾದಂತ ಮಾರಕ‌ ರೋಗ ಜಗತ್ತಿನ ಬಹುಪಾಲು ರಾಷ್ಟ್ರಗಳನ್ನು ತಲ್ಲಣಗೊಳಿಸಿದೆ. ಈ ರೋಗಕ್ಕೆ ದೇಶದಲ್ಲಿಯೇ ಮೊದಲ ಸಾವಾಗಿದ್ದು ನಮ್ಮ ಕಲಬುರಗಿಯಲ್ಲಿ. ಆ ನಂತರದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತಂದ ನಿಯಮಗಳಿಂದಾಗಿ ರೋಗ ವ್ಯಾಪಕವಾಗಿ ಹಬ್ಬದಂತೆ ನಿಯಂತ್ರಿಸಲಾಯಿತು.

ಈ ಮಹತ್ಕಾರ್ಯದಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮಹತ್ವದ್ದಾಗಿದ್ದು ಸಿಬ್ಬಂದಿಗಳು ಹಗಲಿರುಳು ಶ್ರಮಿಸಿ ಕಲಬುರಗಿ‌ ಜಿಲ್ಲೆ ಅದರಲ್ಲೂ ಪ್ರಮುಖವಾಗಿ ನಗರವ್ಯಾಪ್ತಿಯ ಪ್ರಮುಖ ಪ್ರದೇಶಗಳಲ್ಲಿ ನಾಕಾಬಂದಿ, ಚೆಕ್ ಪೋಸ್ಟ್ ಸ್ಥಾಪಿಸಿದರು. ಅಂತಹ ಕಟ್ಟುನಿಟ್ಟಿನ ಕ್ರಮ ಇಂದಿಗೂ ಜಾರಿಯಲ್ಲಿವೆ.

ತಮ್ಮ ಜೀವನ ಹಂಗು ತೊರೆದು ಕೊರೋನಾ ಮಹಾಮಾರಿಯ ವಿರುದ್ದ ಸೆಣಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ರಕ್ಷಣಾ ಸಲಕರಣೆಗಳು ಅಗತ್ಯವಿದ್ದು ಈ ನಿಟ್ಟಿನಲ್ಲಿ ತಾವು ಅವರಿಗೆ ಬೇಕಾಗುವ ಸಾಮಗ್ರಿಗಳನ್ನು ಹಸ್ತಾಂತರಿಸುತ್ತಿರುವುದಾಗಿ ಹೇಳಿದ ಶಾಸಕರು ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಬೆಂಬಲವಾಗಿ ನಿಲ್ಲುವುದು ತಮ್ಮ ಕರ್ತವ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಹಾಜಿರಿದ್ದ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರಿಗೆ ಈ ಕೆಳಗಿನ ಸಾಮಗ್ರಿಗಳನ್ನು ವಿತರಿಸಿದರು.

50 ಪಿ ಪಿ ಈ ಕಿಟ್ಸ್ (PPE KITS), 100 ಸೆನಿಟೈಜರ್ (500 ml), 400 ಫೇಸ್ ಶೀಲ್ಡ್ , 2000 ಕೈಗವಸುಗಳು, 2500 ಸರ್ಜಿಕಲ್ ಮಾಸ್ಕ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಕ ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೆದಾರ್, ಕಾಂಗ್ರೆಸ್ ಪಕ್ಷದ ಟಾಸ್ಕ್ ಫೋರ್ಸ್ ಜಿಲ್ಲಾಧ್ಯಕ್ಷ ಡಾ. ಕಿರಣ್ ದೇಶಮುಖ್ ಮತ್ತಿತರಿದ್ದರು.

emedialine

Recent Posts

ಫ.ಗು. ಹಳಕಟ್ಟಿ ವಚನ ತವನಿಧಿಯ ಸಂರಕ್ಷಕ: ಬಿ.ಆರ್. ಪಾಟೀಲ

ಕಲಬುರಗಿ: ಮನೆ, ಮಠ, ಜಗುಲಿಗಳಲ್ಲಿ ಪೂಜಿಸುತ್ತಿದ್ದ ತಾಡೋಲೆಗಳನ್ನು ಹೆಕ್ಕಿ ತೆಗೆದ ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯದ ಪಿತಾಮಹ ಎಂದು ಮುಖ್ಯಮಂತ್ರಿಗಳ…

10 mins ago

ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಕಲಬುರಗಿ: ಸ್ಥಳೀಯ ಕೆಬಿಎನ್ ವಿವಿಯ ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನವನ್ನು ಆಚರಿಸಲಾಯಿತು. ರೇಡಿಯೋ ಡಿಗ್ನೋಸಿಸ ವಿಭಾಗದ ಮಾಜಿ ಮುಖಸ್ಥ ಡಾ.…

13 mins ago

ಈಡಿಗ ನಿಗಮ ಅನುದಾನಕ್ಕೆ ವಿಧಾನಸಭೆಯಲ್ಲಿ ಧ್ವನಿಯಾಗುವೆ: ಶಾಸಕ ಗವಿಯಪ್ಪ

ಕಲಬುರಗಿ : ರಾಜ್ಯದ ಈಡಿಗ ಬಿಲ್ಲವ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರವು ಘೋಷಣೆ ಮಾಡಿದ ಬ್ರಹ್ಮಶ್ರೀ ನಾರಾಯಣ…

17 mins ago

ಕಲ್ಯಾಣ ಕರ್ನಾಟಕದ 18 ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ: ಡಾ. ಅಜುಸಿಂಗ್

ಕಲಬುರಗಿ: ಕಂದಾಯ ಇಲಾಖೆಯ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಭಾಗದ ನೂತನ 18 ತಾಲೂಕು ಕೇಂದ್ರಗಳಲ್ಲಿ ಆಡಳಿತ ವಿಧಾನಸೌಧಗಳನ್ನು ನಿರ್ಮಿಸಲು ತಲಾ…

20 mins ago

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

4 hours ago

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

6 hours ago