ಸುರಪುರ: ಸರಕಾರ ಗರ್ಭೀಣಿ ಮಹಿಳೆಯರು ಮತ್ತು ಬಾಣಂತಿಯರು ಹಾಗೂ ಮಕ್ಕಳಿಗಾಗಿ ಪೌಷ್ಠಿಕಾಂಶವುಳ್ಳ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದು ತಾವೆಲ್ಲರು ಇವುಗಳನ್ನು ತೆಗೆದುಕೊಂಡು ಉಪಯೋಗಿಸುವಂತೆ ಆಲ್ದಾಳ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಚನ್ನಮ್ಮ ಆರ್.ದೊರೆ ತಿಳಿಸಿದರು.
ಆಲ್ದಾಳ ಗ್ರಾಮದ ಅಂಗನವಾಡಿ ಸಂಖ್ಯೆ ೧ ರಲ್ಲಿ ಹಮ್ಮಿಕೊಂಡಿದ್ದ ಪೌಷ್ಠಿಕ ಆಹಾರ ಪದಾರ್ಥಗಳ ವಿತರಣೆ ಮಾಡಿ ಮಾತನಾಡಿ,ಇಂದು ನಮ್ಮ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿನ ಮಹಿಳೆಯರು ಮತ್ತು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದು,ಈ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಸರಕಾರ ಆಹಾರ ಧಾನ್ಯಗಳ ವಿತರಣೆ ಮಾಡುತ್ತಿದ್ದು ಇವುಗಳನ್ನು ಸರಿಯಾದ ಕ್ರಮದಲ್ಲಿ ಉಪಯೋಗಿಸಿದರೆ ಅಪೌಷ್ಠಿಕತೆ ಹೋಗಲಾಡಿಸಲು ಸಾಧ್ಯವಿದೆ ಎಂದರು.
ಸರಕಾರದ ಆದೇಶದಂತೆ ನಿಮ್ಮ ಮನೆ ಬಾಗಿಲಿಗೆ ಬಂದು ಪೌಷ್ಠೀಕಾಂಶವುಳ್ಳ ಪದಾರ್ಥಗಳನ್ನು ನೀಡುತ್ತಿದ್ದು ಮಕ್ಕಳಿಗೂ ಈ ಪದಾರ್ಥಗಳನ್ನು ತಿನ್ನಿಸುವ ಮೂಲಕ ದೇಶ ಅಪೌಷ್ಠಿಕ ಮುಕ್ತಗೊಳಿಸಲು ತಾವೆಲ್ಲರು ಸಹಕರಿಸಬೇಕೆಂದರು.ಆರು ತಿಂಗಳಿಂದ ಮೂರು ವರ್ಷದ ವರೆಗಿನ ಎಲ್ಲಾ ಮಕ್ಕಳಿಗು ಈ ಪದಾರ್ಥಗಳನ್ನು ಕೊಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ೯೧ ಜನ ಮಕ್ಕಳಿಗೆ,೧೫ ಜನ ಗರ್ಭೀಣಿಯರಿಗೆ,೧೫ ಜನ ಬಾಣಂತಿಯರಿಗೆ ಹಾಗು ೯ ಜನ ವಲಸೆ ಬಂದ ಮಹಿಳೆಯರಿಗೆ ಆಹಾರ ಧಾನ್ಯಗಳ ಪದಾರ್ಥ ನೀಡಲಾಯಿತು.ಈ ಸಂದರ್ಭದಲ್ಲಿ ಅಡುಗೆ ಸಹಾಯಕಿ ನಿಂಗಮ್ಮ ಮತ್ತು ನೀಲಮ್ಮ,ಆಶಾ ಕಾರ್ಯಕರ್ತೆ ಶಾಂತಮ್ಮ ಸೇರಿದಂತೆ ಅನೇಕ ಜನ ಮಹಿಳೆಯರು ಮತ್ತು ಮಕ್ಕಳಿದ್ದರು.
ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…