ತಹಶೀಲ್ದಾರ್ ವರ್ಮಾ ಅವರಿಂದ ಪೌರಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ

0
29

ಶಹಾಬಾದ: ನಗರವನ್ನು ಸ್ವಚ್ಛಗೊಳಿಸಿ ಉತ್ತಮ ಪರಿಸರ ನಿರ್ಮಾಣ ಮಾಡಿ ಕೊಡುವುದರ ಮೂಲಕ ನಮ್ಮೆಲ್ಲರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಶ್ರಮ ಎಲ್ಲದಕ್ಕಿಂತ ಶ್ರೇಷ್ಠವಾದುದು ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

ಅವರು ನಗರದ ಜಿಇ ಕಾಲೋನಿಯಲ್ಲಿ ಅಧಿಸೂಚಿತ ಕ್ಷೇತ್ರ ಸಮಿತಿಯ ಪೌರಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿ ಮಾತನಾಡಿದರು.

Contact Your\'s Advertisement; 9902492681

ಕೊರೊನಾ ವೈರಸ್ ಹಾಗೂ ಲಾಕ್ ಡೌನ್ ಸಂದರ್ಭದಲ್ಲಿ ಬಹುತೇಕ ಜನರು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಆದರೆ ಪೌರಕಾರ್ಮಿಕರು ಕಾಲೋನಿಯ ಕಸವನ್ನು ತೆಗೆದು ಸ್ವಚ್ಛಗೊಳಿಸುವುದರ ಜತೆಗೆ ಅಂದವಾಗಿ ಕಾಣುವಂತೆ ಮಾಡುತ್ತಿದ್ದಾರೆ.ಅವರ ಶ್ರಮಕ್ಕೆ ಬೆಲೆ ಕಟ್ಟಲಾಗದು. ಇಲ್ಲಿನ ಯುವಕರ ತಂಡ ಸ್ವಯಂಪ್ರೇರಿತರಾಗಿ ಅದು ಕಡುಬಡವರಿಗೆ,ನಿರ್ಗತಿಕರಿಗೆ ಹಾಗೂ ಪೌರಕಾರ್ಮಿಕರನ್ನು ಗುರುತಿಸಿ ಆಹಾರವನ್ನು ಹಂಚುತ್ತಿದ್ದಾರೆ.

ತಾಲೂಕಾಢಳಿತದ ಕೆಲಸಕ್ಕೆ ಸಹಕಾರ ನೀಡುತ್ತಿದ್ದಾರೆ.ಅವರ ಸೇವೆ ಶ್ಲಾಘನೀಯವಾದುದು. ನಿಮ್ಮ ಸುತ್ತ ಮುತ್ತಲಿನ ಬಡಜನರು ಇದ್ದರೇ ಅವರನ್ನು ಗುರುತಿಸಿ ನಮಗೆ ತಿಳಿಸಿ, ಅವರಿಗೂ ಹಂಚಲಾಗುತ್ತದೆ. ಅದರ ಜತೆಗೆ ನಿಮಗೆ ಆಹಾರದ ಸಮಸ್ಯೆಯಾದರೆ ನಮ್ಮ ಗಮನಕ್ಕೆ ತಂದರೆ ಮತ್ತೆ ತಾಲೂಕಾಢಳಿತ ನೆರವಿಗೆ ಬರುತ್ತದೆ ಎಂದರು.
ಅಧಿಸೂಚಿತ ಕ್ಷೇತ್ರ ಸಮಿತಿಯ ಅಧಿಕಾರಿ ಪೀರಶೆಟ್ಟಿ ಮಾತನಾಡಿ, ಕೆಲಸದ ಸಮಯದಲ್ಲಿ ಎಲ್ಲರೂ ಮಾಸ್ಕ್ ಧರಿಸಿ, ಕೈಚೀಲ ಬಳಸಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ರೋಗ ಬಾರದಂತೆ ಮತ್ತು ಹರಡದಂತೆ ನಿಮ್ಮ ಹಾಗೂ ಕುಟುಂಬದ ರಕ್ಷಣೆ ಮಾಡುವುದು ನಿಮ್ಮ ಕರ್ತವ್ಯ ಎಂದರು.ಸುಮಾರು ೩೦ ಜನರಿಗೆ ಆಹಾರದ ಕಿಟ್ ವಿತರಿಸಿದರು.

ನಗರಸಭೆಯ ಸದಸ್ಯ ರವಿ ರಾಠೋಡ, ಭಾಗಿರಥಿ ಗುನ್ನಾಪೂರ, ಗಿರಿರಾಜ ಮೇಲಗಿರಿ, ದತ್ತಾ ಫಂಡ್, ಅರ್ಜುನ ತಳವಾರ, ಭೋಜುಕುಮಾರ ಜಾಪೂರ, ಜಿಇ ಕಾಲೋನಿಯ ಸುಪರ್‌ವೈಸರ್ ಸೆಕ್ಯೂರಿಟಿ ಮೆಹಬೂಬ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here