ಶಹಾಬಾದ: ನಗರವನ್ನು ಸ್ವಚ್ಛಗೊಳಿಸಿ ಉತ್ತಮ ಪರಿಸರ ನಿರ್ಮಾಣ ಮಾಡಿ ಕೊಡುವುದರ ಮೂಲಕ ನಮ್ಮೆಲ್ಲರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಶ್ರಮ ಎಲ್ಲದಕ್ಕಿಂತ ಶ್ರೇಷ್ಠವಾದುದು ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.
ಅವರು ನಗರದ ಜಿಇ ಕಾಲೋನಿಯಲ್ಲಿ ಅಧಿಸೂಚಿತ ಕ್ಷೇತ್ರ ಸಮಿತಿಯ ಪೌರಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿ ಮಾತನಾಡಿದರು.
ಕೊರೊನಾ ವೈರಸ್ ಹಾಗೂ ಲಾಕ್ ಡೌನ್ ಸಂದರ್ಭದಲ್ಲಿ ಬಹುತೇಕ ಜನರು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಆದರೆ ಪೌರಕಾರ್ಮಿಕರು ಕಾಲೋನಿಯ ಕಸವನ್ನು ತೆಗೆದು ಸ್ವಚ್ಛಗೊಳಿಸುವುದರ ಜತೆಗೆ ಅಂದವಾಗಿ ಕಾಣುವಂತೆ ಮಾಡುತ್ತಿದ್ದಾರೆ.ಅವರ ಶ್ರಮಕ್ಕೆ ಬೆಲೆ ಕಟ್ಟಲಾಗದು. ಇಲ್ಲಿನ ಯುವಕರ ತಂಡ ಸ್ವಯಂಪ್ರೇರಿತರಾಗಿ ಅದು ಕಡುಬಡವರಿಗೆ,ನಿರ್ಗತಿಕರಿಗೆ ಹಾಗೂ ಪೌರಕಾರ್ಮಿಕರನ್ನು ಗುರುತಿಸಿ ಆಹಾರವನ್ನು ಹಂಚುತ್ತಿದ್ದಾರೆ.
ತಾಲೂಕಾಢಳಿತದ ಕೆಲಸಕ್ಕೆ ಸಹಕಾರ ನೀಡುತ್ತಿದ್ದಾರೆ.ಅವರ ಸೇವೆ ಶ್ಲಾಘನೀಯವಾದುದು. ನಿಮ್ಮ ಸುತ್ತ ಮುತ್ತಲಿನ ಬಡಜನರು ಇದ್ದರೇ ಅವರನ್ನು ಗುರುತಿಸಿ ನಮಗೆ ತಿಳಿಸಿ, ಅವರಿಗೂ ಹಂಚಲಾಗುತ್ತದೆ. ಅದರ ಜತೆಗೆ ನಿಮಗೆ ಆಹಾರದ ಸಮಸ್ಯೆಯಾದರೆ ನಮ್ಮ ಗಮನಕ್ಕೆ ತಂದರೆ ಮತ್ತೆ ತಾಲೂಕಾಢಳಿತ ನೆರವಿಗೆ ಬರುತ್ತದೆ ಎಂದರು.
ಅಧಿಸೂಚಿತ ಕ್ಷೇತ್ರ ಸಮಿತಿಯ ಅಧಿಕಾರಿ ಪೀರಶೆಟ್ಟಿ ಮಾತನಾಡಿ, ಕೆಲಸದ ಸಮಯದಲ್ಲಿ ಎಲ್ಲರೂ ಮಾಸ್ಕ್ ಧರಿಸಿ, ಕೈಚೀಲ ಬಳಸಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ರೋಗ ಬಾರದಂತೆ ಮತ್ತು ಹರಡದಂತೆ ನಿಮ್ಮ ಹಾಗೂ ಕುಟುಂಬದ ರಕ್ಷಣೆ ಮಾಡುವುದು ನಿಮ್ಮ ಕರ್ತವ್ಯ ಎಂದರು.ಸುಮಾರು ೩೦ ಜನರಿಗೆ ಆಹಾರದ ಕಿಟ್ ವಿತರಿಸಿದರು.
ನಗರಸಭೆಯ ಸದಸ್ಯ ರವಿ ರಾಠೋಡ, ಭಾಗಿರಥಿ ಗುನ್ನಾಪೂರ, ಗಿರಿರಾಜ ಮೇಲಗಿರಿ, ದತ್ತಾ ಫಂಡ್, ಅರ್ಜುನ ತಳವಾರ, ಭೋಜುಕುಮಾರ ಜಾಪೂರ, ಜಿಇ ಕಾಲೋನಿಯ ಸುಪರ್ವೈಸರ್ ಸೆಕ್ಯೂರಿಟಿ ಮೆಹಬೂಬ ಇತರರು ಇದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…