ಕಲಬುರಗಿಯಲ್ಲಿ ಚಿರತೆ ಪ್ರತ್ಯಕ್ಷ

0
401

ಕಲಬುರಗಿ: ಇಲ್ಲಿನ ಕಮಲಾಪುರ ತಾಲ್ಲೂಕಿನ ಬಬಲಾದ (ಕೆ) ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ವಾಗಿರುವ ಘಟನೆ ನಡೆದಿದೆ.

ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಕಳೆದ ಎರಡು ದಿನಗಳಿಂದ ಚಿರತೆಯೊಂದು ಪ್ರತ್ಯಕ್ಷವಾಗುತ್ತಿರುವ ಬಗ್ಗೆ ಗ್ರಾಮದಲ್ಲಿ ಸುದ್ದಿ ಹರಡುತಿದ್ದಂತೆ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಈ ಚಿರತೆ ಹಿಡಿಯಲು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.

Contact Your\'s Advertisement; 9902492681

ಸ್ಥಳೀಯ ಜನರ ಸುರಕ್ಷೆ ಮತ್ತು ಪ್ರಾಣಿಯನ್ನು ಸುರಕ್ಷಿತವಾಗಿ ಹಿಡಿಯಲು ಸುಮಾರು 20ಕ್ಕೂ ಹೆಚ್ಚು ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಕಬ್ಬಿನ ಗದ್ದೆಯ ಸುತ್ತಮುತ್ತ ಬೋನ್ ಇರಿಸಿ ಕಾರ್ಯಚರಣೆ ನಡೆಸುತ್ತಿದ್ದಾರೆ.

ಚಿರತೆ ಮರಿಗಳು ಹಾಕಿರಬಹುದು ಅಥವಾ ಗಾಯಗೊಂಡಿದ್ದು, ಎರಡೂ ಕಾರಣದಿಂದ ಸ್ಥಳದಲ್ಲಿ ಚಿರತೆ ಬೀಡು ಬಿಟ್ಟಿರಬಹುದು ಎಂದು ಸ್ಥಳದಲ್ಲಿದ ಅರಣ್ಯ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಡ್ರೋನ್ ಕ್ಯಾಮೆರಾ ಬಳಸಿ ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಜ್ಜಾಗಿದೆ ಎಂದು ತಿಳಿದು ಬಂದಿದೆ. ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸ್ಥಳದಲ್ಲಿ ಆರ್.ಎಫ್.ಓ ಗಳಾದ ಸುನಿಲ್ ಕುಮಾರ್, ಭೀಮರಾವ ನೇತೃತ್ವದ, ತಂಡ ಕಾರ್ಯ ನಿರ್ವಹಿಸುತ್ತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here