ಶಹಾಬಾದ: ನಗರದ ಜೆಪಿ ಕಾಲೋನಿಯಲ್ಲಿ ನಿವೃತ್ತರಾಗಿರುವ ಕಡು ಬಡವ ಕಾರ್ಮಿಕರ ಕುಟುಂಬದವರಿಗೆ ಕಲಬುರಗಿ ಗ್ರಾಮೀಣ ಮತಕ್ಷೇತ್ರ ಶಾಸಕ ಬಸವರಾಜ ಮತ್ತಿಮಡು ದವಸ ಧಾನ್ಯದ ಕಿಟ್ ವಿತರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಸವರಾಜ ಮತ್ತಿಮಡು, ಜೆಪಿ ಕಾರ್ಖಾನೆಯಲ್ಲಿ ನಿವೃತ್ತರಾಗಿರುವ 40 ಬಡ ಕುಟುಂಬಗಳಿವೆ ಎಂದು ತಿಳಿಸಿದಾಗ, ತಕ್ಷಣವೇ ಅವರಿಗೆ ನೆರವಿಗೆ ಬಂದಿದ್ದೆವೆ. ಇದ್ದವರು ಕೂಡ ಇಲ್ಲದವರಿಗೆ ಸಹಾಯ ಹಸ್ತ ಚಾಚಿದರೆ ಬಡ ಕುಟುಂಬಗಳಿಗೆ ಸಹಾಯವಾದೀತು. ಅಲ್ಲದೇ ಇನ್ನೂ ಉಳಿದಿರುವ ಕುಟುಂಬದವರಿಗೂ ಕಿಟ್ ವಿತರಿಸುವ ವ್ಯವಸ್ಥೆ ಮಾಡುವದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಅಕ್ಕಿ,ಬೆಳೆ, ಎಣ್ಣೆ ಇತರ ಸಾಮಗ್ರಿ ಹಾಗೂ ಮಾಸ್ಕಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಸುರೇಶ ವರ್ಮಾ, ತಾಪಂ. ಕಾರ್ಯನಿರ್ವಾಕ ಅಧಿಕಾರ ಲಕ್ಷ್ಮಣ ಶೃಂಗೇರಿ, ಚಿತ್ತಾಪುರ ತಾಲೂಕ ಬಿಜೆಪಿ ಅಧ್ಯಕ್ಷ ನೀಲಕಂಠರಾವ ಪಾಟೀಲ, ನಗರ ಘಟಕದ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಪಿಐ.ಬಿ.ಅಮರೇಶ, ಪೌರಾಯುಕ್ತ ವೆಂಕಟೇಶ, ಪಿಎಸ್ಐ ಮಹಾಂತೇಶ ಪಾಟೀಲ, ಕನಕಪ್ಪ ದಂಡಗುಲಕರ್, ಅಣ್ಣಪ್ಪ ದಸ್ತಾಪುರ, ನಾಗರಾಜ ಮೇಲಗಿರಿ, ಸುಭಾಷ ಜಾಪೂರ, ನಿಂಗಣ್ಣ ಹುಳಗೋಳ,ಚಂದ್ರಕಾಂತ ಗೊಬ್ಬುರಕರ್, ದುರ್ಗಪ್ಪ ಪವಾರ, ರವಿ ರಾಠೋಡ, ಭೀಮಯ್ಯ ಗುತ್ತೇದಾರ, ಸದಾನಂದ ಕುಂಬಾರ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…