ಕಲಬುರಗಿ: ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮಾಡಲಾಗಿರುವ ಕಂಟೇನ್ಮೆಂಟ್ ಝೋನ್ಗಳಿಗೆ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳದ ಕಪಿಲ್ ಮೋಹನ್ ಅವರು ಭೇಟಿ ನೀಡಿ, ಸ್ಥಳೀಯ ಜನತೆಯ ಯೋಗ-ಕ್ಷೇಮ ವಿಚಾರಿಸಿದರು.
ಮೋಮಿನ್ಪುರ ಸ್ಥಳೀಯ ಜನರೊಂದಿಗೆ ಮಾತನಾಡಿದ ಕಾರ್ಯದರ್ಶಿಗಳು, ಕೊರೋನಾ ವೈರಸ್ ಕುರಿತು ಆತಂಕಕ್ಕೆ ಒಳಗಾಗಬಾರದು. ಯಾವುದೇ ಊಹಾಪೋಹಗಳಿಗೆ ಆಸ್ಪದ ಕೊಡಬಾರದು. ಆದರೆ, ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನಿವಾಸಿಗಳಿಗೆ ಜಾಗೃತಿ ಬಗ್ಗೆ ತಿಳಿಹೇಳಿದರು.
ಪ್ರೈಮರಿ, ಸೆಕೆಂಡರಿ ಕಾಂಟ್ಯಾಕ್ಟ್ ವ್ಯಕ್ತಿಗಳಿಗೆ ಆರೋಗ್ಯದ ದೃಷ್ಟಿಯಿಂದ ಕ್ವಾರಾಂಟೈನ್ ಮಾಡಲಾಗುತ್ತದೆ. ಇದಕ್ಕೆ ಯಾರೂ ಹೆದರಬಾರದು. ನಿಮ್ಮೆಲರ ಸಹಕಾರ ಅಗತ್ಯವಿದೆ. ಕ್ವಾರಾಂಟೈನÀಲ್ಲಿರುವವರ ಆರೋಗ್ಯಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಕ್ರಮಕೈಗೊಂಡಿದೆ ಎಂದು ಹೇಳಿದರು.
ಆಸ್ಪತ್ರೆಯಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿನ ರೋಗಿಗಳಿಗೆ ಮನೆಯಿಂದ ಊಟ-ಉಪಹಾರ ನೀಡಬಹುದೆಂದು ಅವರು ತಿಳಿಸಿದರು. ಹಾಲು, ತರಕಾರಿ, ಹಣ್ಣು ಮುಂತಾದ ಅಗತ್ಯವಸ್ತುಗಳು ಸರಿಯಾಗಿ ಲಭ್ಯವಾಗುತ್ತಿವೆಯೇ ಎಂಬ ಬಗ್ಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕರಾದ ಖನೀಜ್ ಫಾತಿಮಾ, ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಡಿಸಿಪಿ ಕಿಶೋರ್ ಬಾಬು, ಸ್ಥಳೀಯ ಜನಪ್ರತಿನಿಧಿಗಳಾದ ಡಾ. ಅಜಗರ್ ಚುಲಬುಲ್, ರಹೀಮ್ ಮಿರ್ಚಿ, ನಾಸೀರ್ ಹುಸೇನ್ ಉಸ್ತಾದ, ಸೇರಿದಂತೆ ಅಧಿಕಾರಿಗಳು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…