ಸುರಪುರ: ನಿತ್ಯೋತ್ಸವದ ಮೂಲಕ ನಾಡಿಗೆ ಚಿರಪರಿಚಿತರಾಗಿದ್ದ ಜಗದ ಕವಿ,ಯುಗದ ಕವಿ ಕೆ.ಎಸ್.ನಿಸಾರ್ ಅಹಮದ್ ಅವರ ನಿಧನ ಈ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಸಚಿವ ರಾಜಾ ಮದನ ಗೋಪಾಲ ನಾಯಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕವಿ ಕೆ.ಎಸ್.ನಿಸಾರ್ ಅಹಮದ್ ಅವರ ನಿಧನದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ನಿಸಾರ್ ಅಹಮದ್ ಎಂಬುವವರು ಅವರೊಬ್ಬ ನಾಡಿನ ಆಸ್ತಿಯಾಗಿದ್ದರು, ಜಾತಿ ಮತ ಧರ್ಮಗಳ ಹಂಗನ್ನು ಮೀರಿ ನಿತ್ಯವು ಕನ್ನಡ ಕನ್ನಡವೆಂದು ಕನ್ನಡವೇ ಜಾತಿ ಕನ್ನಡವೇ ಧರ್ಮವೆಂದು ಬದುಕಿದವರು.ಅಂತಹ ಮಹಾನ್ ಚೇತನ ಇಂದು ನಾಡನ್ನು ಅಗಲಿದ್ದು ತೀವ್ರ ದುಃಖ ತರಿಸಿದೆ.ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸಿದರು.
ಅದೇರಿತಿಯಾಗಿ ಕೆ.ಎಸ್.ನಿಸಾರ್ ಅಹಮದ್ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಶ್ರೀನಿವಾಸ ಜಾಲವಾದಿ,ಮಾಜಿ ಕಸಾಪ ಅಧ್ಯಕ್ಷ ಶಾಂತಪ್ಪ ಬೂದಿಹಾಳ,ಕರವೇ ರಾಜ್ಯ ಪ್ರಧಾನ ಸಂಚಾಲಕ ಬಸವರಾಜ ಪಡಕೋಟೆ, ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ತಾಲೂಕು ಅಧ್ಯಕ್ಷ ರಾಜು ಕುಂಬಾರ,ಕರವೇ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮರಡಿ,ಜಯಕರ್ನಾಟಕ ಅಧ್ಯಕ್ಷ ರವಿ ನಾಯಕ,ಯುವ ಕರವೇ ನಗರಧ್ಯಕ್ಷ ಸಚಿನ್ ಕುಮಾರ ನಾಯಕ,ದೇವು ಹೆಬ್ಬಾಳ,ರಾಜಶೇಖರ ದೇಸಾಯಿ,ಅನ್ವರ್ ಜಮಾದಾರ್,ಕರವೇ ರಾಘವೇಂದ್ರ ಗೆದ್ದಲಮರಿ ಸೇರಿದಂತೆ ಅನೇಕರು ಕವಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…