ಕಲಬುರಗಿ: ತಾಲ್ಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿನ ವಿಜಯಬ್ಯಾಂಕ (ಬ್ಯಾಂಕ್ ಆಫ್ ಬರೋಡಾ) ಶಾಖಾ ಕಚೇರಿಯಲ್ಲಿ ರೈತರು ತಮ್ಮ ಖಾತೆಗೆ ಜಮೇಯಾದ ತೊಗರಿ ಹಣ ನೀಡುವಲ್ಲಿ ಸ್ಥಳಿಯ ಬ್ಯಾಂಕ ವ್ಯವಸ್ಥಾಪಕರು ನಿರಾಕರಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನಪಡೆ ನೇತೃತ್ವದಲ್ಲಿ ನೂರಾರು ರೈತರು ದಿಢೀರ್ ಪ್ರತಿಭಟನೆ ನಡೆಸಿ, ಬ್ಯಾಂಕ್ ವ್ಯವಸ್ಥಾಪಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಭೆಬ್ರವರಿ-ಮಾರ್ಚ್ ತಿಂಗಳಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಕೃಷಿ ಪತ್ತಿನ ಸಹಕಾರ ಸಂಘದಿಂದ ಖರೀದಿಸಿದ ತೊಗರಿ ಮೊತ್ತವು ಆ ಬ್ಯಾಂಕ್ ಗೆ ಜಮೆಯಾಗಿದೆ. ಕೆಲ ರೈತರು ಹಣ ಡ್ರಾ ಮಾಡಲು ಬ್ಯಾಂಕ್ಗೆ ತೆರಳಿದರೆ, ಜಾಮೀನು ನೀಡಿದವರ ಸಾಲ ಮರುಪಾವತಿಸಬೇಕು. ಆದರೆ ಸರ್ಕಾರದಿಂದ ಲಿಖಿತ ಆದೇಶ ಪ್ರತಿ ತಂದರೆ ತೋಗರಿ ಮಾರಾಟದ ಹಣ ಕೊಡುವುದಾಶಗಿ ಉಡಾಫೆಯಾಗಿ ವರ್ತಿಸಿದ್ದಾರೆ.
ಆದರೆ ಜಿಲ್ಲೆಯ ಇತರೆ ಬ್ಯಾಂಕ್ಗಳಲ್ಲಿ ರೈತರ ತೊಗರಿ ಹಣಕ್ಕೆ ಯಾವುದೇ ತೊಂದರೆ ಅನುಭವಿಸಿಲ್ಲ. ತಕ್ಕಣ ಲೀಡ್ ಬ್ಯಾಂಕ್ ಮುಖು ವ್ಯವಸ್ಥಾಪಕರು ಮಧ್ಯಪ್ರವೇಶಿಸಿ ರೈತತರಿಗೆ ಅನಗತ್ಯ ಕಿರುಕುಳ ನೀಡುವುದನ್ನು ತಪ್ಪಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.
ಇನ್ನು ಕೆಲ ರೈತರು ಬೆಳೆ ಸಾಲ ಮರುಪಾವತಿ ಅವಧಿ ಜೂನ್ ತಿಂಗಳಲ್ಲಿದೆ. ಆ ವೇಳೆ ಸಾಲ ಭರ್ತಿ ಮಾಡುತ್ತೇವೆ ಎಂದು ಭರವಸೆ ನೀಡಿದರೂ ರೈತರ ಸಂಕಷ್ಟಗಳು ಕೇಳುವವರು ಇಲ್ಲದಂತಾಗಿದೆ. ತಕ್ಷಣ ಈ ಬ್ಯಾಂಕ್ ವ್ಯವಸ್ಥಾಪಕರ ವಿರುದ್ದ ಶಿಸ್ತು ಕ್ರಮ ಜರುಗಬೇಕು ಎಂದು ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಶಾಂತಪ್ಪ ಪಾಟೀಲ್, ಗ್ರಾಪಂ ನೌಕರರ ಸಂಘ ಜಿಲ್ಲಾ ಖಜಾಂಚಿ ಶಿವಾನಂದ ಕವಲಗಾ(ಬಿ) ಸೇರಿದಂತೆ ಅನೇಕ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…