ಮಾನವೀಯತೆ ಮೆರೆದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈರಣ್ಣ ಝಳಕಿ

ಕಲಬುರಗಿ: ಕ್ಯಾನ್ಸರ್ ರೋಗಿಯೊಬ್ಬರಿಗೆ ತಮ್ಮ ಬೈಕ್‍ನಲ್ಲಿ ಕರೆದೊಯ್ದು ಚಿಕಿತ್ಸೆ ಹಾಗೂ ಮಾತ್ರೆ ಕೊಡಿಸಿ ಮನೆಗೆ ತಲುಪಿಸಿ ಮಾನವೀಯತೆ ಮೆರೆದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈರಣ್ಣ ಝಳಕಿ ಅವರು ಕ್ಯಾನ್ಸರ್ ಪೀಡಿತ ವಯೋವೃದ್ದ ರೋಗಿಯೊಬ್ಬರಿಗೆ ತಮ್ಮ ಬೈಕಿನಲ್ಲೇ ಕಿದ್ವಾಯಿ ಅಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಹಾಗೂ ಮಾತ್ರೆ ಕೊಡಿಸಿ ನಂತರ ಮತ್ತೆ ಅವರನ್ನ ಸುರಕ್ಷಿತ ವಾಗಿ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಸೂಕ್ತ ಚಿಕಿತ್ಸೆ ಹಾಗೂ ಅಗತ್ಯ ಮಾತ್ರೆಗಳಿಲ್ಲದ ಕಲಬುರಗಿ ಹೊರವಲಯದ ನಂದಿಕೂರು ನಿವಾಸಿ 68 ವರ್ಷ ವಯೋಮಾನದ ಕಾನ್ಸರ್ ರೋಗಿಯೊಬ್ಬರು ಈರಣ್ಣ ಝಳಕಿ ಅವರಿಗೆ ಕರೆ ಮಾಡಿ ಆಸ್ಪತ್ರೆಗೆ ಹೋಗಲು ಯಾವುದೇ ವಾಹನ ಸೌಲಭ್ಯ ದೊರಕದ ಬಗ್ಗೆ ವಿವರಿಸಿ ಸಹಾಯ ಮಾಡುವಂತೆ ಕೋರಿದ್ದಾರೆ. ಕೂಡಲೇ ತಮ್ಮ ಬೈಕ್ ನಲ್ಲಿ ಅವರ ನಿವಾಸಕ್ಕೆ ಧಾವಿಸಿದ ಈರಣ್ಣ ಝಕಳಿ ಆ ವಯೋವೃದ್ದರನ್ನು ತಮ್ಮ ಬೈಕ್‍ನಲ್ಲೇ ಕರೆದೊಯ್ದು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದರ ಜೊತೆಗೆ ಅವರಿಗೆ ಬೇಕಾದ ಅಗತ್ಯ ಮಾತ್ರೆಗಳನ್ನು ಕೊಡಿಸಿ ಅವರಿಗೆ ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ.

ಈ ಕುರಿತು ತಮ್ಮ ಅನುಭವ ಹಂಚಿಕೊಂಡ ವಯೋವೃದ್ದರು ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ತಾವು ವಾಸವಾಗಿರುವ ಏರಿಯಾಗೆ ಯಾವುದೇ ವಾಹನ ಬಾರದಿದ್ದರಿಂದ ಕೊನೆಗೆ ಈರಣ್ಣ ಝಳಕಿ ಅವರಿಗೆ ಕರೆ ಮಾಡಿ ಅವರಿಂದ ಸಹಾಯ ಪಡೆದುಕೊಂಡೆ ಎಂದು ಅವರ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕೊರೋನಾ ವೈರಸ್ ಕಲಬುರಗಿ ನಗರ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಹಬ್ಬುತ್ತಿದ್ದು ಲಾಕ್ ಡೌನ್ ವಿಸ್ತರಿಸಲಾಗಿದೆ. ಹಾಗಾಗಿ, ವಯೋವೃದ್ದ ಕ್ಯಾನ್ಸರ್ ಪೀಡಿತರು ತಮ್ಮ ಸಮಸ್ಯೆಯನ್ನು ನನ್ನ ಬಳಿ ತೋಡಿಕೊಂಡರು. ಕೂಡಲೇ ನಾನು ಅವರಿಗೆ ನೆರವಾಗಿ ನನ್ನ ಕರ್ತವ್ಯ ಹಾಗೂ ಸಮಾಜಿಕ ಜವಾಬ್ದಾರಿ ನಿಭಾಯಿಸಿದ್ದೇನೆ ಎಂದು ಝಳಕಿ ಹೇಳಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420