ಅಬಕಾರಿ ಇಲಾಖೆಗೆ ಬೀಗ: ಮದ್ಯದ ಅಂಗಡಿಗಳ ದಾಸ್ತಾನು ಚಿತ್ರೀಕರಣಕ್ಕೆ ಆಗ್ರಹ

ಚಿತ್ತಾಪುರ: ತಾಲೂಕಿನಲ್ಲಿರುವ ಮದ್ಯದ ಅಂಗಡಿಗಳಾದ ಸಿಎಲ್-೨ ಸಿಎಲ್-೦೯( ಎಂಎಸ್‌ಐಎಲ್ ಮಳಿಗೆ) ಸನ್ನದುಗಳಿಗೆ ಮದ್ಯ ಮಾರಾಟ ಮಾಡಲು ಸರಕಾರ ಅನುಮತಿ ನೀಡಿದೆ, ಆದರೆ ಕ್ಲೋಸಿಂಗ್ ಸ್ಟಾಕ್ ಮತ್ತು ಓಪನಿಂಗ್ ಸ್ಟಾಕ್ ಪರೀಶಿಲಿಸಿ ಚಿತ್ರೀಕರಣ ಮಾಡುವ ಮೂಲಕ ವ್ಯತ್ಯಾಸ ಕಂಡು ಬಂದರೆ ಕೂಡಲೇ ತಪ್ಪಸ್ಥರ ವಿರುದ್ದ ಕಠೀಣ ಕ್ರಮ ಕೈಗೊಳ್ಳಬೇಕು ಎಂದು ಡಿಎಸ್‌ಎಸ್ ತಾಲೂಕು ಸಂಚಾಲಕ ಆನಂದ ಕಲ್ಲಕ್ ಮತ್ತು ದಲಿತ ಮಾದಿಗ ಸಮನ್ವಯ ಸಮಿತಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿಕರ್, ಮುಖಂಡ ನಾಗರಾಜರೆಡ್ಡಿ ಆಗ್ರಹಿಸಿದ್ದಾರೆ.

ಈ ಕುರಿತು ಮನವಿ ಪತ್ರ ಕೊಡಲು ಅಬಕಾರಿ ಇಲಾಖೆಗೆ ಹೋದರೆ ಅಲ್ಲಿ ಕಚೇರಿಗೆ ಬೀಗ ಹಾಕಲಾಗಿತ್ತು ಹೀಗಾಗಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ ಎಂದ ಅವರು, ಕೋವಿಡ್-೧೯ ಮುಂಜಾಗ್ರತಾ ಕ್ರಮವಾಗಿ ಲಾಕ್‌ಡೌನ್ ಜಾರಿಗೊಳಿಸಿದ್ದರಿಂದ ಎಲ್ಲ ಕಡೆ ಅಕ್ರಮ ಮದ್ಯ ಮಾರಾಟ ದುಪ್ಪಟ್ಟು ಮರ‍್ನಾಲ್ಕು ಪಟ್ಟು ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡಿದ್ದು ಜಗ್ಗಜಾಹಿರ ಎಷ್ಟೋ ಕಡೆ ಅಬಕಾರಿ ಇಲಾಖೆಯಿಂದ ಹಾಗೂ ಪೊಲೀಸ್ ಇಲಾಖೆ ಅಕ್ರಮ ಮದ್ಯ ಮಾರಾಟ ಮಾಡುವಾಗ ದಾಳಿ ನಡೆಸಿ ಸೀಜ್ ಮಾಡಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಕೇವಲ ಕೇಲವೇ ಕೆಲವು ಮಾತ್ರ ಮಾದ್ಯಮಗಳಲ್ಲಿ ಬಿತ್ತಣವಾಗಿದೆ ಎಷ್ಟೋ ಕಡೆ ಕೇಸ್ ಕೂಡ ದಾಖಲಿಸಿಲ್ಲವೆಂದು ತಿಳಿದು ಬಂದಿರುತ್ತದೆ ಎಂದರು.

ಒಂದು ಅಂದಾಜಿನ ಪ್ರಕಾರ ಎಲ್ಲ ಮದ್ಯದ ಅಂಗಡಿಗಳಲ್ಲಿ ಕೊನೆಯ ಸಂಗ್ರಹ ಇದಿದ್ದು ಈಗ ಅಂದರೆ ಮರು ಪ್ರಾರಂಭ ಸಂಗ್ರಹ ಪೂರ್ಣ ಪ್ರಮಾಣದಲ್ಲಿ ಖಾಲಿಯಾಗಿರುತ್ತದೆ ಎಂದು ತಿಳಿದು ಬಂದಿರುತ್ತದೆ, ಆದಕಾರಣ ಅಬಕಾರಿ ಸಚಿವರ ಆದೇಶದನ್ವಯ ಕ್ಲೋಸಿಂಗ್ ಸ್ಟಾಕ್ ಮತ್ತು ಓಪನಿಂಗ್ ಸ್ಟಾಕ್ ನ ಕುರಿತು ತಾಲೂಕಿನ ಎಲ್ಲ ಮದ್ಯದ ಅಂಗಡಿಗಳನ್ನು ಕೂಲಂಕೂಷವಾಗಿ ಪರೀಶಿಲಿಸಬೇಕು ಒಂದು ವೇಳೆ ವತ್ಯಾಸ ಕಂಡು ಬಂದಲ್ಲಿ ಅಂತಹ ಮದ್ಯದ ಅಂಗಡಿಗಳ ಪರವಾನಿಗೆ ರದ್ದು ಮಾಡುತ್ತೇವೆ ಎಂದು ಹೇಳಿರುತ್ತಾರೆ.

ಹಾಗಾಗಿ ಕೊರೊನಾ ಲಾಕ್‌ಡೌನ್ ನಡುವೆಯೂ ಹಗಲಿರಳು ದುಡಿದರೂ ತಮ್ಮ ನಿಷ್ಪಕ್ಷಪಾತವಾದ ಸೇವೆಯನ್ನು ನಿರ್ಲಕ್ಷ್ಯಸಿ ಅಕ್ರಮ ಮದ್ಯ ಮಾರಾಟ ಮಾಡಿದ್ದರಿಂದ ಅಂತವರ ವಿರುದ್ದ ಕಾನೂನು ಬದ್ದವಾಗಿ ಕೂಲಂಕುಷವಾಗಿ ವಿಡಿಯೋ ಚಿತ್ರೀಕರಣ ಮೂಲಕ ಕ್ಲೋಸಿಂಗ್ ಸ್ಟಾಕ್ ಮತ್ತು ಓಪನಿಂಗ್ ಸ್ಟಾಕ್ ಪರೀಶಿಲಿಸಿ ತಪ್ಪಸ್ಥರ ವಿರುದ್ದ ಕಠೀಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

2 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

15 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

16 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

16 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420