ಲಾಕ್‍ಡೌನ್ ಉಲ್ಲಂಘಿಸಿ ಪ್ರಾರ್ಥನೆ ಸಲ್ಲಿಸಿರುವ ಹಿನ್ನೆಲೆ ವಕ್ಫ್ ಸಂಸ್ಥೆಯ ಆಡಳಿತ ಮಂಡಳಿ ರದ್ದು

0
113

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಟಿ. ಬೊಮ್ಮನಳ್ಳಿ ಗ್ರಾಮದ ಜಾಮಿಯಾ ಮಸೀದಿಯಲ್ಲಿ ಲಾಕ್‍ಡೌನ್ ಉಲ್ಲಂಘಿಸಿ 2020ರ ಏಪ್ರಿಲ್ 26 ರಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ಈ ವಕ್ಫ್ ಸಂಸ್ಥೆಯ ಆಡಳಿತ ಮಂಡಳಿಯನ್ನು ರದ್ದುಗೊಳಿಸಿದೆ ಎಂದು ಕಲಬುರಗಿ ಜಿಲ್ಲಾ ವಕ್ಫ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಲ್ಲದೇ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ಈ ವಕ್ಫ್ ಸಂಸ್ಥೆಯನ್ನು ತನ್ನ ನೇರ ಆಡಳಿತಕ್ಕೆ ಪಡೆದು ಟಿ. ಬೊಮ್ಮನÀಳ್ಳಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸೈಯದ್ ಫಯಾಜ್ ಅಹ್ಮದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ದಿನಾಂಕ: 02-05-2020ರ ರಂದು ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here