ಬೆಂಗಳೂರಿನಿಂದ ಆಗಮಿಸಿದವರನ್ನು ಸ್ವಾಗತಿಸಿದ ಶಾಸಕ ಸುಭಾಷ್ ಗುತ್ತೇದಾರ

ಆಳಂದ: ಕೊರೊನಾ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸಿಲುಕಿ ಈಗ ಮೊದಲನೇ ಹಂತದಲ್ಲಿ ವಾಪಸ್ ಆಗಿರುವ ಆಳಂದ ತಾಲೂಕಿನ ಜನತೆಯನ್ನು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಮಂಗಳವಾರ ಆಳಂದ ಪಟ್ಟಣದ ತಹಸೀಲ ಕಚೇರಿ ಸಮೀಪ ಸ್ವಾಗತಿಸಿದರು.

ಮೂರು ಬಸ್‍ಗಳಲ್ಲಿ ಆಗಮಿಸಿದ್ದ ಜನತೆಯನ್ನು ಸ್ವಾಗತಿಸಿ ಮಾತನಾಡಿದ ಅವರು, ಬೆಂಗಳೂರಿನಿಂದ ಆಗಮಿಸಿದವರು 14 ದಿನಗಳ ಕಾಲ ಗೃಹ ಬಂಧನದಲ್ಲಿರಬೇಕು ಕಾಲ ಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಕೊಳ್ಳಬೇಕು ಇದು ಎಲ್ಲರ ದೃಷ್ಟಿಯಿಂದ ಒಳ್ಳೆಯದು. ಇದುವರೆಗೂ ಅಲ್ಲೇ ಉಳಿದಿರುವ ಇನ್ನಿತರ ಜನರನ್ನು ವಾಪಸ್ ಅವರ ಊರುಗಳಿಗೆ ತರೆ ತರುವ ಕೆಲಸ ಪ್ರಗತಿಯಲ್ಲಿದೆ. ರಾಜ್ಯ ಸರ್ಕಾರವು ಉಚಿತವಾಗಿ ಕರೆ ತರುವ ಅವಧಿಯನ್ನು ಗುರುವಾರದವರೆಗೂ ವಿಸ್ತರಿಸಿದೆ ಯಾರು ಆತಂಕಕ್ಕೆ ಒಳಗಾಗಬಾರದು ಎಂದು ಧೈರ್ಯ ತುಂಬಿದರು.

ಮನೆ ಮನೆಗಳಿಗೆ ತಪಾಸಣೆಗೆ ಬರುವ ಆಶಾ ಕಾರ್ಯಕರ್ತರ ಜೊತೆ ಸೌಜನ್ಯದಿಂದ ವರ್ತಿಸಿ ಅವರಿಗೆ ಸಹಕಾರ ನೀಡಬೇಕು. ನಿಮ್ಮಗಳ ಆರೋಗ್ಯದ ಜೊತೆಗೆ ಇತರರ ಆರೋಗ್ಯ ಕಾಪಾಡುವುದು ಈಗ ನಿಮ್ಮ ಕೈಯಲ್ಲಿದೆ ಅದಕ್ಕಾಗಿ ಸಾಮಾಜಿಕ ಸ್ವಾಸ್ಥ್ಯದ ಕಲ್ಪನೆಯೊಂದಿಗೆ ಮನೆಯಲ್ಲಿ ಇರಬೇಕು ಎಂದು ಜನತೆಗೆ ಮನವಿ ಮಾಡಿದರು.

ರಾಜ್ಯ ಸರ್ಕಾರದ ಕ್ರಮದಿಂದ ನಾವು ನಮ್ಮ ಊರಿಗೆ ಮರಳುತ್ತಿದ್ದೇವೆ. ಸರ್ಕಾರ ಹೇಳಿದ ಎಲ್ಲ ವಿಷಯವನ್ನು ಚಾಚು ತಪ್ಪದೇ ಪಾಲಿಸುತ್ತೇವೆ. ನಮಗಾಗಿ ವಿಶೇಷ ಕಾಳಜಿ ವಹಿಸಿದ ಶಾಸಕ ಸುಭಾಷ್ ಆರ್ ಗುತ್ತೇದಾರರಿಗೆ ವಿಶೇಷ ಕೃತಜ್ಞನತೆಗಳು.- ವಾಪಸ್ಸಾದವರು 

ಜನರನ್ನು ಸುರಕ್ಷಿತವಾಗಿ ಕರೆತಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಾದ ಮಲ್ಲಿಕಾರ್ಜುನ, ಚೆನ್ನಬಸಪ್ಪ, ಧನರಾಜ, ಕೇರಲಿಂಗ, ಸೈಯ್ಯದ, ಸಾದೀಕ್‍ರನ್ನು ಶಾಸಕರು ಅಭಿನಂದಿಸಿದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

3 hours ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

4 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

4 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

4 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

4 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420