ಸುರಪುರ: ಕೊರೊನಾ ವೈರಸ್ ಹರಡದಂತೆ ತಡೆಯಲೆಂದು ಸರಕಾರ ಸಾಮಾಜಿಕ ಅಂತರದ ನಿಯಮ ರೂಪಿಸಿ ವ್ಯಕ್ತಿಯಿಂದ ವ್ಯಕ್ತಿಗೆ ಕನಿಷ್ಟ ಆರು ಫೀಟ್ಗಳ ಅಂತರ ಕಾಯ್ದುಕೊಳ್ಳುವಂತೆ ಹಾಗು ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿರುವಂತೆ ನಿಯಮ ಮಾಡಿದೆ.ಆದರೆ ಇವೆಲ್ಲವು ಬಾರ್ ಮುಂದೆ ಲೆಕ್ಕಕ್ಕೆ ಇಲ್ಲದಂತಾಗಿದೆ.
ನಗರದ ಎಂಎಸ್ಐಎಲ್ ಬಾರ್ ಮುಂದೆ ಸೇರಿದ ನೂರಾರು ಸಂಖ್ಯೆಯ ಜನರು ಸಾಲುಗಟ್ಟಿ ಒಬ್ಬರ ಮೇಲೊಬ್ಬರು ಬೀಳುವ ರೀತಿಯಲ್ಲಿ ನಿಂತು ಸಾಮಾಜಿಕ ಅಂತರ ಮರೆತದ್ದು ಕಂಡಬಂತು.ಅಲ್ಲದೆ ಸಾಲಲ್ಲಿ ನಿಂತ ಅನೇಕ ಜನ ಮದ್ಯ ಪ್ರೀಯರು ಮುಖಕ್ಕೆ ಮಾಸ್ಕ್ ಧರಿಸದೆ ಮುಂಜಾಗ್ರತೆ ಇಲ್ಲದೆ ನೂಕು ನುಗ್ಗುಲು ಉಂಟು ಮಾಡಿದರು.
ಈಗಾಗಲೆ ರಾಜ್ಯದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ನಿತ್ಯವು ಏರುತ್ತಿದ್ದು ಗುಳೆ ಹೋಗಿ ಬಂದವರನ್ನು ಆಸ್ಪತ್ರೆಗಳಲ್ಲಿ ಫೀವರ್ ಚೆಕ್ ಮಾಡುತ್ತಿದ್ದರು ಯಾರಲ್ಲಾದರೂ ಸೊಂಕು ಕಾಣಿಸಿಕೊಂಡರೆ ಗತಿ ಏನು ಎಂಬದು ಎಲ್ಲರ ಚಿಂತೆಯಾದರೆ,ಬಾರ್ ಮುಂದೆ ನಿಂತು ಮದ್ಯ ಖರೀದಿಗೆ ನೂಕು ನುಗ್ಗಲಲ್ಲಿ ಸೇರಿದವರಲ್ಲಿ ಗುಳೆ ಹೋಗಿ ಬಂದವರು ಇರುವುದು ವಿಪರ್ಯಾಸವಾಗಿದೆ.
ಪೊಲೀಸ್ ಸಿಬ್ಬಂದಿ ಸಾಲಲ್ಲಿ ನಿಂತ ಸುರಪಾನ ಪ್ರಿಯರನ್ನು ನಿಯಂತ್ರಿಸಲು ಪ್ರಯತ್ನಿಸಿದರು ಸಾಧ್ಯವಾಗುತ್ತಿಲ್ಲ.ಆದ್ದರಿಂದ ಇನ್ನೂ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ನೇಮಿಸುವ ಅವಶ್ಯಕತೆ ಇದೆ ಎಂದು ಅನೇಕರು ಮಾತಾಡಿಕೊಳ್ಳುತ್ತಿದ್ದಾರೆ.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…