ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ವೇತನಕ್ಕಾಗಿ ಸಿಎಂಗೆ ಮನವಿ

ಕಲಬುರಗಿ: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ವೇತನವನ್ನು ಕೊಡಬೇಕೆಂದು ಕೆಎಸ್‍ಆರ್‍ಟಿಸಿ, ಸ್ಟಾಫ್ ಮತ್ತು ವರ್ಕರ್ಸ್ ಫೇಡರೇಷನ್ ವತಿಯಿಂದ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಯಿತು ಎಂದು ಫೇಡರೇಷನ್‍ನ ಅಧ್ಯಕ್ಷ ಹೆಚ್.ಬಿ. ಅನಂತಸುಬ್ಬರಾವ್ ತಿಳಿಸಿದ್ದಾರೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ (ಕೆಎಸ್‍ಆರ್‍ಟಿಸಿ. ಬಿಎಂಟಿಸಿ, ಎನ್‍ಡಬ್ಲ್ಯೂಕೆಆರ್‍ಟಿಸಿ, ಎನ್‍ಇಕೆಆರ್‍ಟಿಸಿ) ಸುಮಾರು 1.25 ಲಕ್ಷಕ್ಕೂ ಹೆಚ್ಚು ಜನ ನೌಕರರು, ಅಧಿಕಾರಿಗಳು ಬಹಳ ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ನಮ್ಮ ಸಾರಿಗೆ ನಿಮಗಮಗಳು ರಾಷ್ಟ್ರೀಯ ಹಾಗೂ ಅಂರತರಾಷ್ಟ್ರೀಯ ಮಟ್ಟದಲ್ಲೂ ಮನ್ನಣೆ ಪಡೆದಿವೆ ಎಂದರು.

ಮಹಾಮಾರಿ ಕೋವಿಡ್-19ರ ಪರಿಣಾಮವಾಗಿ ಲಾಕ್‍ಡೌನ್ ಘೋಷಣೆ ಮಾಡಿದ ನಂತರ ಮಾರ್ಚ್ 22 ರಿಂದ ನಮ್ಮ ನಿಗಮಗಳ ಯಾವುದೇ ಬಸ್ ಸಂಚಾರವಾಗುತ್ತಿಲ್ಲ. ಅವಶ್ಯಕತೆಗನುಗುಣವಾಗಿ ಕೆಲವು ವಾಹನಗಳು ಮಾತ್ರ ಸಂಚರಿಸುತ್ತಿವೆ. ಅವುಗಳಿಂದ ಯಾವುದೇ ಆದಾಯವಿಲ್ಲ. ಇತ್ತೀಚೆಗೆ ಸರ್ಕಾರದ ಆದೇಶದ ಮೇರೆಗೆ ವಲಸೆ ಕಾರ್ಮಿಕರನ್ನು ಉಚಿತವಾಗಿ ತಮ್ಮ ಊರುಗಳಿಗೆ ಸೇರಿಸಲು ನಮ್ಮ ನಿಗಮಗಳು ಶ್ರಮಿಸುತ್ತಿವೆ. ಇದರಿಂದ ಕೂಡ ನಿಗಮಗಳಿಗೆ ಯಾವುದೇ ಆದಾಯವಿಲ್ಲ. ಇದಕ್ಕೆ ಮುಂಚೆಯೇ ನಾಲ್ಕು ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಕೆಟ್ಟಿತ್ತು. ಇದಕ್ಕೆ ಹಲವಾರು ನೈಜ ಕಾರಣಗಳಿಗೆ. ಈಗ ನಿಗಮಗಳ ಹಣಕಾಸಿನ ಮುಗ್ಗಟ್ಟು ಮುಗಿಲುಮುಟ್ಟಿದೆ. ಆದರೂ ಕೂಡ ಮಾರ್ಚ್ 2020 ರ ವೇತನವನ್ನು ಎಲ್ಲ ನೌಕರರಿಗೂ ಪಾವತಿಸಲಾಗಿದೆ. ಸಾರಿಗೆ ನಿಗಮ ಅಥವಾ ನಿಗಮಗಳು ಎಂದೂ ಕೂಡ ತಮ್ಮ ನೌಕರರಿಗೆ ವೇತನ ಕೊಡಲು ಸರ್ಕಾರದಿಂದ ಹಣ ಪಡೆದಿಲ್ಲ ಎಂದರು.

ಈ ಏಪ್ರೀಲ್ 2020ರ ವೇತನಕ್ಕೆ ನಿಗಮಗಳಲ್ಲಿ ಹಣವಿಲ್ಲದ ಕಾರಣ ರಾಜ್ಯ ಸರ್ಕಾರ ಸಹಾಯಹಸ್ತವನ್ನು ನೀಡಬೇಕೆಂದು ನಿಗಮಗಳು ಕೇಳಿವೆ. ನಿಗಮಗಳಲ್ಲಿ ಪ್ರತಿ ತಿಂಗಳ 1ನೇ ತಾರೀಖಿನಿಂದ ವಿವಿಧ ವರ್ಗಗಳ ನೌಕರರಿಗೆ ವೇತನ ನೀಡಲಾಗುತ್ತದೆ. ಈ ಬಾರಿ ಇನ್ನೂ ವೇತನ ನೀಡುವ ಪ್ರಕ್ರಿಯೇ ಆರಂಭವಾಗಿಲ್ಲ. ನಿಗಮಗಳ ಲೆಕ್ಕಾಚಾರದ ಪ್ರಕಾರ ಈ ವೇತನ ಪಾವತಿಗೆ ಸುಮಾರು 330 ಕೋಟಿ ರೂ.ಗಳು ಬೇಕಾಗುತ್ತದೆ ಎಂದರು.

ಕೆಲವು ಹಸಿರು ವಲಯಗಳಲ್ಲಿ ನಮ್ಮ ವಾಹನಗಳು ಓಡಾಡಲು ಸೂಚನೆಗಳಿದ್ದರೂ ಕೋವಿಡ್-19ರ ನಿರ್ಬಂಧಗಳನ್ನು ಪಾಲಿಸುವ ದೃಷ್ಠಿಯಿಂದ ಹೆಚ್ಚಿನ ಆದಾಯವನ್ನು ಈ ವಾಹಗಳಿಂದ ಆಪೇಕ್ಷಿಸುವುದು ಸಾಧ್ಯವಿಲ್ಲ ಎಂದರು.

ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಕೂಡ ಸಾರಿಗೆ ನಿಗಮಗಳನ್ನು ಆರ್ಥಿಕವಾಗಿ ಬಲಪಡಿಸುವ ವಿಷಯವನ್ನು ಹಲವಾರು ಬಾರಿ ಪ್ರಸ್ತಾಪಿಸಿದ್ದಾರೆ. ಇದಕ್ಕೆ ನಮ್ಮ ಸಹಮತವಿದೆ. ತಾವು ನಮ್ಮ ಫೇಡರೇಶನ್ ನಿಯೋಗಕ್ಕೆ ಈ ವಿಷಯವನ್ನು ಚರ್ಚಿಸಲು ವೇಳೆ ಕೊಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸುತ್ತೇವೆ.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಡಾ. ಸಿದ್ದನಗೌಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ಆರ್.ವಿ.ನಾಯಕ ಚಾಲನೆ

ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…

6 mins ago

ಸಂಸ್ಕøತಿ ಉಳಿಸಿ ಬೆಳೆಸುವ ಸಂಘದ ಕಾರ್ಯ ಶ್ಲಾಘನೀಯ

ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…

7 mins ago

ಸುರಪುರ:ಅಭಾವೀಲಿಂ ಮಹಾಸಭೆಗೆ ಪದಾಧಿಕಾರಿಗಳ ನೇಮಕ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…

10 mins ago

ಕಲಬುರಗಿ ಪಾಲಿಕೆ ಉಪ ಆಯುಕ್ತರನ್ನು ಅಮಾನತುಗೊಳಿಸಲು ಶಾಸಕ ಬಿ.ಆರ್. ಪಾಟೀಲ ಆಗ್ರಹ

ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…

13 mins ago

ಅ.6 ರಂದು ಡಾ. ಲಕ್ಷ್ಮಣ ದಸ್ತಿಯವರಿಂದ 371 J ಕಲಂ ಸೌಲತ್ತುಗಳ ಬಗ್ಗೆ ವಿಶೇಷ ಉಪನ್ಯಾಸ

ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…

26 mins ago

ಜಾತಿ, ಧರ್ಮ, ಭಾಷೆ, ಎಲ್ಲವನ್ನು ಮೀರಿನಿಂತ ಭಕ್ತಿಯ ದೇವರ ಉಪಾಸನೆಯೇ ಭಜನೆ

ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…

30 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420