ಕಲಬುರಗಿ: ಕೊರೋನಾ ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನಗಳನ್ವಯ ಸಾರ್ವಜನಿಕರ ಹಿತದೃಷ್ಟಿಯಿಂದ ಲಾಕ್ಡೌನ್ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಗಳಿಗೆ ಬುಧವಾರದಂದು ಮತ್ತೆ ಕೆಲವೊಂದು ವಾಣಿಜ್ಯ ಅಂಗಡಿ ಮತ್ತು ಮಳಿಗೆಗಳನ್ನು ತೆರೆಯಲು ಸಡಿಲಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ಈ ವಾಣಿಜ್ಯ ಅಂಗಡಿ ಹಾಗೂ ಮಳಿಗೆಗಳಲ್ಲಿ ಜಿಲ್ಲೆಯಾದ್ಯಂತ ಕನಿಷ್ಠ ಸಿಬ್ಬಂದಿಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಹ್ಯಾಂಡ್ವಾಶ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಸುವ ಷರತ್ತುಗೊಳಪಟ್ಟು ಮಳಿಗೆಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
ಹೊಸದಾಗಿ ಅನುಮತಿ ನೀಡಿದ ಸೇವೆಗಳ ವಿವರ: ಬಟ್ಟೆ, ಭಾಂಡೆ, ಬಂಗಾರ, ಮೊಬೈಲ್ ಅಂಗಡಿ ರಿಚಾರ್ಜ್ ಸೆಂಟರ್, ಬೇಕರಿ, ಎಲೆಕ್ಟ್ರಾನಿಕ್ಸ್ ಶಾಪ್ ಮತ್ತು ಹೋಮ್ ಅಪ್ಲಾಯನ್ಸ್, ಬುಕ್ ಸ್ಟಾಲ್, ಸ್ಟೇಷನರಿ ಅಂಗಡಿ, ಹಾರ್ಡವೇರ್, ಪೇಂಟ್ ಅಂಗಡಿ, ಅಟೋಮೋಬೈಲ್ ಅಂಗಡಿ ಹಾಗೂ ಕಂಪ್ಯೂಟರ್ (ಸಾಫ್ಟವೇರ್ ಹಾಗೂ ಹಾರ್ಡ್ವೇರ್) ಅಂಗಡಿಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ. ಇದಲ್ಲದೇ ಎಲ್ಲ ತರಹದ ಹೊಟೇಲ್ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕನಿಷ್ಠ ಸಿಬ್ಬಂದಿಯೊಂದಿಗೆ ಪಾರ್ಸಲ್ ವ್ಯವಸ್ಥೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಇನ್ನೂ ಲಭ್ಯವಿರದ ಸೇವೆಗಳು: ಮಾಲ್, ಮಲ್ಟಿಪ್ಲೆಕ್ಸ್, ಸಿನಿಮಾ ಚಿತ್ರಮಂದಿರ, ಲಾಡ್ಜ್ಗಳು ತೆರೆಯಲು ಅನುಮತಿ ಇರುವುದಿಲ್ಲ. ಮಂದಿರ, ಮಸೀದಿ, ಗುರುದ್ವಾರ ಹಾಗೂ ಚರ್ಚ್ಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿಷೇಧಿಸಲಾಗಿದೆ. ಹೇರ್ ಕಟಿಂಗ್ ಸಲೂನ್ ಅಂಗಡಿಗಳು, ಮಸಾಜ್ ಸೆಂಟರ್ಸ್, ಈಜುಕೊಳಗಳು, ಜಿಮ್ಗಳನ್ನು ತೆರೆಯುವಂತಿಲ್ಲ. ಕಿರಾಣಾ ಅಂಗಡಿ, ಪಾನ್ ಅಂಗಡಿಗಳಲ್ಲಿ ಬೀಡಿ, ಸಿಗರೇಟ್, ಗುಟಕಾ, ಪಾನ್ ಬೀಡಾಗಳ ಮಾರಾಟ ಮಾಡುವಂತಿಲ್ಲ. ಸಾರ್ವಜನಿಕರು ಪಾನ್ ಬೀಡಾಗಳನ್ನು ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಸಹ ನಿಷೇಧಿಸಲಾಗಿದೆ. ಅನಾವಶ್ಯಕ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಅನುಮತಿ ನೀಡಿರುವುದಿಲ್ಲ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…