ಜಾಬ್‍ಕಾರ್ಡಗಾಗಿ ಅರ್ಜಿ ಸಲ್ಲಿಸಿದ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಕ. ಪ್ರಾಂತ ರೈತ ಸಂಘ ಆಗ್ರಹ

0
187

ಶಹಾಬಾದ: ಹೊನಗುಂಟಾ ಗ್ರಾಮ ಪಂಚಾಯತಿಯಲ್ಲಿ ಜಾಬ್‍ಕಾರ್ಡಗಾಗಿ ಅರ್ಜಿ ಸಲ್ಲಿಸಿದ ಕೂಲಿ ಕಾರ್ಮಿಕರಿಗೆ ನರೇಗಾಯೋಜನೆಯಡಿ ಕೆಲಸ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅಶೋಕ ಮ್ಯಾಗೇರಿ ನೇತೃತ್ವದಲ್ಲಿ ಶುಕ್ರವಾರ ಗ್ರಾಪಂ ಪಿಡಿಓ ಅವರಿಗೆ ಮನವಿ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಅಶೋಕ ಮ್ಯಾಗೇರಿ, ಶಹಾಬಾದ ತಾಲೂಕಿನ ಮೂರು ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಪ್ರಾರಂಭವಾಗಿದೆ.ಆದರೆ ಹೊನಗುಂಟಾ ಗ್ರಾಪಂಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಇನ್ನೂ ಕೆಲಸ ಪ್ರಾರಂಭಿಸಿಲ್ಲ. ಈಗಾಗಲೇ ಜಾಬ್‍ಕಾರ್ಡಗಾಗಿ ಅರ್ಜಿ ಸಲ್ಲಿಸಿದ ಕೂಲಿ ಕಾರ್ಮಿಕರಿಗೆ ಜಾಬ್‍ಕಾರ್ಡ ಮಾಡಿಲ್ಲ.ಅಲ್ಲದೇ ಕೆಲಸಕ್ಕೂ ತೆಗೆದುಕೊಂಡಿಲ್ಲ. ಲಾಕ್‍ಡೌನ್ ಆಗಿದ್ದರಿಂದ ಬಡಕೂಲಿ ಕಾರ್ಮಿಕರು ಇತ್ತ ಆಹಾರವಿಲ್ಲದೆ ಹಾಗೂ ಕೆಲಸವಿಲ್ಲದೇ ಪರದಾಡುತ್ತಿದ್ದಾರೆ.

Contact Your\'s Advertisement; 9902492681

ಅವರಿಗೆ ಕೆಲಸ ಕೊಡದೇ ಗ್ರಾಪಂ ಅಧಿಕಾರಿಗಳು ತೊಂದರೆ ಕೊಡುತ್ತಿದ್ದಾರೆ. ಕೂಲಿ ಕಾರ್ಮಿಕರಿಗೆ ಕೆಲಸ ನೀಡದಿದ್ದರೇ ಮೇ 11 ರಂದು ಬೆಳಿಗ್ಗೆ 11 ಗಂಟೆಯಿಂದ 11:30ವರೆ ಗಂಟೆಯವರೆಗೆ ಕೂಲಿ ಕಾರ್ಮಿಕರು ತಮ್ಮ ತಮ್ಮ ಮನೆಯ ಮುಂದೆ ತಟ್ಟೆ ತಟ್ಟುವ ಮೂಲಕ ಪ್ರತಿಭಟನೆ ಮಾಡುತ್ತಾರೆ.ಕೂಡಲೇ ಬಡ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಆಗ್ರಹಿಸಿದರು.

ತಾಲೂಕಾ ಸಂಚಾಲಕ ರಾಯಪ್ಪ ಹುರಮುಂಜಿ, ಶಿವಕುಮಾರ ಬುರ್ಲಿ, ಸಾಯಿಬಣ್ಣ ಇಜೇರಿ, ಕಾಶಿನಾಥ.ಎಮ್, ಅರುಣಕುಮಾರ, ಶಂಕರ ಭಜಂತ್ರಿ ಸೇರಿದಂತೆ ಅನೇಕರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here