ಎಸ್.ಎಫ್.ಐ ದಿಂದ ರಕ್ತದಾನ ಶಿಬಿರ

0
29

ರಾಯಚೂರು: ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI) ರಾಯಚೂರು ಜಿಲ್ಲಾ ಸಮಿತಿ ಹಾಗೂ ಕವಿತಾಳ ನಗರ ಘಟಕಗಳ ಸಹಯೋಗದೊಂದಿಗೆ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಶಿಬಿರವನ್ನು SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ, ತಾಲೂಕು ಆಡಳಿತ ವೈದ್ಯ ಅಧಿಕಾರಿ ಚಂದ್ರಶೇಖರಯ್ಯ ಸ್ವಾಮಿ, ಕವಿತಾಳ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯ ಅಧಿಕಾರ ಡಾ. ಅಮೃತ್ ರಾಠೋಡ್ ಸೇರಿ ಇತರರು ಉದ್ಘಾಟಿಸಿದರು.

Contact Your\'s Advertisement; 9902492681

ನಂತರ SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡತ್ತಾ ಕೊರೋನಾ ಲಾಕ್ ಡೌನ್ ನ ಈ ಸಂಧರ್ಭದಲ್ಲಿ ಎಲ್ಲೆಡೆಯೂ ರೋಗಿಗಳಿಗೆ ರಕ್ತದ ಅಭಾವ ಉಂಟಾಗಿದೆ ಇದನ್ನು ಅರಿತುಕೊಂಡು ನಾವುಗಳು ನಮ್ಮ ಸಂಘಟನೆಯ ನೇತೃತ್ವದಲ್ಲಿ ರಾಜ್ಯವ್ಯಾಪಿ ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕ ರೋಗಿಗಳಿಗೆ ನೆರವಾಗುತ್ತಿದ್ದೇವೆ. ಕೊರೋನಾ ವೈರಸ್ ಭೀತಿಯಿಂದ ಹೊರ ಬಂದು ದೈಹಿಕ ಅಂತರ ಕಾಯ್ದುಕೊಳ್ಳುವ ಜೊತೆಗೆ ಆರೋಗ್ಯ ಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಮತ್ತು ಲಾಕ್ ಡೌನ್ ನಿಯಮಗಳನ್ನು ಪಾಲಿಸಿ ರಕ್ತದಾನ ಮಾಡಬೇಕು ಜೊತೆಗೆ ರಕ್ತದಾನದ ಬಗ್ಗೆ ಗ್ರಾಮೀಣ ಜನತೆಯಲ್ಲಿ ಇರುವ ತಪ್ಪು ಕಲ್ಪನೆ ಮತ್ತು ಭಯವನ್ನು ದೂರ ಮಾಡಿ ರಕ್ತದಾನದ ಶ್ರೇಷ್ಠತೆಯನ್ನು ಎತ್ತಿ ಹಿಡಿಯುವ ಮೂಲಕ ಇತರರನ್ನು ರಕ್ತದಾನ ಮಾಡುವಂತೆ ಪ್ರೇರೇಪಿಸುವಲ್ಲಿ ಇಂದಿನ ವಿದ್ಯಾರ್ಥಿ, ಯುವಜನರು ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ನಂತರ ತಾಲೂಕು ಆಡಳಿತ ವೈದ್ಯ ಅಧಿಕಾರಿಯಾದ ಚಂದ್ರಶೇಖರಯ್ಯ ಸ್ವಾಮಿ ಮಾತನಾಡಿ ಲಾಕ್ ಡೌನ್ ಸಮಯದಲ್ಲಿ ಮುಂದೆ ಬಂದು ರಕ್ತದಾನದ ಶಿಬಿರವನ್ನು ಏರ್ಪಡಿಸುವ ಮೂಲಕ ಶ್ಲಾಘನೀಯ ಕೆಲಸವನ್ನು SFI ಮತ್ತು DYFI ಸಂಘಟನೆ ಮಾಡುತ್ತಿದೆ. ನಮ್ಮ ಭಾಗದಲ್ಲಿ ರಕ್ತದ ಸಮಸ್ಯೆ ತುಂಬಾ ಇದೆ ಅದನ್ನು ನಾವುಗಳು ನಿಗಿಸುವ ಕೆಲಸ ಮಾಡೋಣ ನಾನು ಇಂದಿನ ರಕ್ತದಾನದ ಶಿಬಿರ ದಲ್ಲಿ ರಕ್ತದಾನ ಮಾಡುತ್ತಿದ್ದೇನೆ ಎಂದು ಮಾತನಾಡಿದರು.
ನಂತರ ರಾಯಚೂರು ರೀಮ್ಸ್ ಆಸ್ಪತ್ರೆ ರಕ್ತ ನಿಧಿ ವಿಭಾಗದ ವೈದ್ಯರಾದ ಡಾ. ಅಹ್ಮದ್ ಹುಸೇನ್ ಮಾತನಾಡಿದರು.

ಈ ರಕ್ತದಾನ ಶಿಬಿರದಲ್ಲಿ ಆರೋಗ್ಯ ಸಿಬ್ಬಂದಿ ಸೇರಿ 52 ಕ್ಕೂ ಅಧಿಕ ಜನ ವಿದ್ಯಾರ್ಥಿ- ಯುವಜನರು ಸ್ವಯಂಚಾಲಿತವಾಗಿ ರಕ್ತದಾನ ಮಾಡಿದರು.

ವೇದಿಕೆಯ ಮೇಲೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಯಾದ ಡಾ. ಅಮೃತ್ ರಾಠೋಡ್, DYFI ರಾಜ್ಯ ಸಮಿತಿ ಸದಸ್ಯರಾದ ಶಿವಪ್ಪ ಬ್ಯಾಗವಾಟ್, SFI ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್, PSI‌ ವೆಂಕಟೇಶ ಕುಮಾರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾತಿ ದರ್ಗಿ ಇದ್ದರು.

ಶಿಬಿರದಲ್ಲಿ DYFI ರಾಜ್ಯ ಸಮಿತಿ ಸದಸ್ಯರಾದ ಚಂದ್ರಶೇಖರ ಗೌಡ ಸಿರವಾರ, SFI ರಾಜ್ಯ ಜಂಟಿ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಾಳ, ನಗರ ಘಟಕದ ಅಧ್ಯಕ್ಷರಾದ ಮೌನೇಶ ಬುಳ್ಳಾಪುರ, DYFI ಅಧ್ಯಕ್ಷರಾದ ಮಹಮ್ಮದ್ ರಫೀ‌ ಬೊದೆಲ್, ಮುಂಡರಾದ ಸೈಯದ್ ಮುನ್ನಾವರ್, ಬಸವಲಿಂಗ, ಮಲ್ಲಿಕಾರ್ಜುನ, ಮಹಾಲಿಂಗ ದೊಡ್ಡಮನಿ, ಸುರೇಶ, ಮುಕ್ತಂಬಾಷಾ ಸೇರಿ ಸಿಬ್ಬಂದಿ ಪ್ರದೀಪ್ ಕುಮಾರ್, ಬಾಲಪ್ಪ ನಾಯಕ, ಮುತ್ತು ಸೇರಿ ಆಸ್ಪತ್ರೆ ಸಿಬ್ಬಂದಿ ಹಾಗೂ ರೀಮ್ಸ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಸಿಬ್ಬಂದಿಗಳು ಸೇರಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here