ಬಿಸಿ ಬಿಸಿ ಸುದ್ದಿ

ಕಾಯಕ ವೃತ್ತಿಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಸಿಎಂಗೆ ಮನವಿ: ದೇಗಾಂವ

ಕಲಬುರಗಿ: ಕಾಯಕ ವೃತ್ತಿಯ ದರ್ಜಿಗಳು, ಅಕ್ಕಸಾಲಿಗರು, ಬಡಿಗರು, ಕಮ್ಮಾರರು, ಕುಂಬಾರರು ಹೂ ಕಟ್ಟುವವರು, ಸೇರಿದಂತೆ ಇನ್ನಿತರರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ನವನಿರ್ಮಾಣ ಸೇನೆ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು ಎಂದು ಜಿಲ್ಲಾಧ್ಯಕ್ಷ ರವಿ ಎನ್. ದೇಗಾಂವ ಅವರು ತಿಳಿಸಿದ್ದಾರೆ.

ದೇಶದಲ್ಲಿ ಮಹಾಮಾರಿ ಕರೋನಾ ಕಾರಣದಿಂದಾಗಿ ಕಳೆದ ೪೫ ದಿನಗಳಿಂದ ಜನ ಜೀವನ ಅಸ್ಥವ್ಯಸ್ತಗೊಂಡಿದೆ. ಲಕ್ಷಾಂತರ ಜನ ದಿನಗೂಲಿ ಉದ್ಯೋಗ ಮಾಡಿಕೊಂಡೆ ಜೀವನ ನಡೆಸುತ್ತಿರುವವರ ಜೀವನ ಕಷ್ಟಕರವಾಗಿದೆ ಆದ್ದರಿಂದ ಕಾಯಕ ವೃತ್ತಗಳಿಗೆ ಮುಖ್ಯಮಂತ್ರಿಗಳು ವಿಶೇಷ ಪ್ಯಾಕೇಜ್‌ನ್ನು ಘೋಷಿಸಬೇಕೆಂದರು.

ರಾಜ್ಯದ ವೃತ್ತಿಪರ ಶ್ರಮಿಕ ವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿಶೇಷ ಪ್ಯಾಕೇಜ್ ನೀಡಿರುವುದು ಅತ್ಯಂತ ಶ್ಲಾಘನೀಯ ಹಾಗೂ ಸ್ವಾಗತಾರ್ಹವಾಗಿದೆ. ಈ ಕ್ರಮಕ್ಕೆ ಕರ್ನಾಟಕ ನವನಿರ್ಮಾಣ ಸೇನೆ ಕಲಬುರಗಿ ಜಿಲ್ಲಾ ಘಟಕವು ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದರು.

ಅದೇ ರೀತಿಯಾಗಿ ಕಾಯಕ ವೃತ್ತಿಯವರಾದ ದರ್ಜಿಗಳು (ಬಟ್ಟೆ ಹೊಲೆಯುವವರು) ಅಕ್ಕಸಾಲಿಗರು, ಬಡಿಗರು, ಕಮ್ಮಾರರು, ಕುಂಬಾರರು, ಹೂ ಕಟ್ಟುವವರು, ಸೇರಿದಂತೆ ಇತರರಿಗೂ ಸಹಿತ ವಿಶೇಷ ಪ್ಯಾಕೇಜ್ ನೀಡುವುದರ ಮೂಲಕ ಸರ್ಕಾರ ಅವರ ಬೆನ್ನಿಗೆ ನಿಲ್ಲಬೇಕೆಂದು ಸೇನೆ ಒತ್ತಾಯಿಸುತ್ತದೆ ಎಂದರು.

emedialine

Recent Posts

ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…

2 hours ago

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…

3 hours ago

ಭಾರತ ಸೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಿಂದ ಸಮಾಲೋಚನ ಕಾರ್ಯಗಾರ

ಕಲಬುರಗಿ: ಭಾರತ ಸೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ನಗರದ ಅಪ್ಪಾ ಪಬ್ಲಿಕ್ ಶಾಲೆಯ ಲಿಂ.ಡಾ.ಬಸವರಾಜಪ್ಪ ಅಪ್ಪಾ ಸ್ಮಾರಕ ಭವನದಲ್ಲಿಂದು…

3 hours ago

ಖಾಸಗಿ ಶಾಲೆಯ ಡೊನೇಷನ್ ಹಾವಳಿ ತಡೆಯುವಂತೆ ಆಗ್ರಹಿಸಿ ಮನವಿ

ಕಲಬುರಗಿ: ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಶುಲ್ಕ ಹೆಚ್ಚಳ ಹಾಗೂ ಕಟ್ಟಡ ಮತ್ತು ಪ್ರವೇಶ ಶುಲ್ಕ ಹೆಸರಿನಲ್ಲಿ ಡೊನೇಷನ್…

3 hours ago

ಪರಿಚಲನೆ ಅಭಿನಂದನಾ ಗ್ರಂಥ ಲೋಕಾರ್ಪಣೆ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಜರುಗುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ…

3 hours ago

ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಅರ್ಜಿ ಸ್ವೀಕಾರ

ಸಾರ್ವಜನಿಕರ ಕೆಲಸಗಳಿಗೆ ವಿಳಂಬ ಮಾಡುವುದು ಸರಿಯಲ್ಲ: ಡಿವೈಎಸ್ಪಿ ಹಣಮಂತ್ರಾಯ ಸುರಪುರ: ಸಾರ್ವಜನಿಕರು ತಮ್ಮ ಯಾವುದೇ ಕೆಲಸಗಳಿಗೆ ಕಚೇರಿಗೆ ಬಂದರೆ ವಿಳಂಬ…

3 hours ago