ಬಿಸಿ ಬಿಸಿ ಸುದ್ದಿ

ಕಾರಜೋಳ ವಿರುದ್ಧ ಅಸಭ್ಯವಾಗಿ ವರ್ತಿಸಿದ ಮಜರ್ ಆಲ್ಂ ಖಾನ್ ಕ್ಷಮೇಯಾಚಿಸಬೇಕು

ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿಗಳ ವಿರುದ್ಧ ಅಸಭ್ಯವಾಗಿ ವರ್ತಿಸಿದ ಕಾಂಗ್ರೆಸ್ ಮುಖಂಡ ಮಜರ್ ಆಲಂ ಖಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಡಾ. ಬಾಬು ಜಗಜೀವನರಾಮ ಅಭಿವೃದ್ದಿ ಮತ್ತು ಹೋರಾಟ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಸಮಿತಿ ಮನವಿ ಸಲ್ಲಿಸಿದ್ದಾರೆ.

ಕಲಬುರಗಿ ಜಿಲ್ಲೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನಗರದ ರೆಡ್ ಝೋನ್‌ನಲ್ಲಿರುವ ಮುಸ್ಲಿಂ ಚೌಕ್‌ಗೆ ಕೊರೋನಾ ರೋಗಕ್ಕೆ ತತ್ತರಿಸಿದ ಜನರ ಕುಂದುಕೊರತೆಗಳ ಕುರಿತು ಹಾಗೂ ಜನರ ಆರೋಗ್ಯದ ಬಗ್ಗೆ ವಿಚಾರಣೆ ಮಾಡಲು ರೆಡ್ ಝೋನ್‌ನಲ್ಲಿರುವ ಮುಸ್ಲಿಂ ಚೌಕ್‌ಗೆ ಆಗಮಿಸಿ, ನೀವೆಲ್ಲರೂ ಆರೋಗ್ಯವಾಗಿ ಇದ್ದೀರಾ ಎಂದು ಸಚಿವರು ಪಕ್ಷಪಾತ ಮರೆತು ಮಾನವೀಯತೆ ದೃಷ್ಟಿಯಿಂದ ಕೇಳಿದಾಗ, ಅಲ್ಲಿ ಇದ್ದ ಕಾಂಗ್ರೆಸ್ ಮುಖಂಡ ಮಜ್‌ರ ಅಲಾಂ ಖಾನ್ ಅವರು ಆರೋಗ್ಯವಾಗಿ ಇದ್ದೀರಾ ಎಂದು ಕೇಳಿದ ಗೊವಿಂದ ಕಾರಜೋಳ ಅವರಿಗೆ, ಇನ್ನೂ ಜೀವಂತವಾಗಿ ಇದ್ದೇವೆ. ಸತ್ತಿಲ್ಲವೆರಂದು ಬಹಳ ಅಸಭ್ಯವಾಗಿ ವರ್ತಿಸಿದ್ದಾರೆ. ರಾಜಕೀಯ ಸ್ಥಾನಮಾನಕ್ಕೆ ಬೆಲೆ ಕೊಡದಿದ್ದರೂ ಪರವಾಗಿಲ್ಲ, ವಯಸ್ಸಿನಲ್ಲಿ ಹಿರಿಯರಾದಂತಹ ಕಾರಜೋಳ ಅವರಿಗೆ ಬಹಳ ಅಸಬ್ಯವಾಗಿ ವರ್ತಿಸಿ ಅಪಮಾನ ಮಾಡಿದಂತಹ ಈ ಕೃತ್ಯಕ್ಕೆ ಸಮಿತಿಯು ಖಂಡಿಸಿತ್ತದೆ ಎಂದು ಸಮಿತಿಯ ತಾಲೂಕ ಪ್ರಧಾನ ಕಾರ್ಯದರ್ಶಿ ರಾಜು. ಎಸ್.ಕಟ್ಟಿಮನಿ ಅವರು ತಿಳಿಸಿದ್ದಾರೆ.

ಮಜರ್ ಆಲಂ ಖಾನ್ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಧ್ಯಮದ ಮೂಲಕ ಕ್ಷಮೇ ಕೇಳಬೇಕು ಎಂದು ಡಾ. ಬಾಬು ಜಗಜೀವನರಾಂ ಹೋರಾಟ ಸಮಿತಿಯು ಮನವಿ ಮಾಡುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾದಿಗ ಸಮಾಜದ ಮುಖಂಡ ರಾಜು.ಆರ್.ವಾಡೇಕರ್, ದಶರಥ ಎಂ.ಕಲಗುರ್ತಿ, ಬಂಡೇಶ ರತ್ನಡಗಿ, ರಾಹುಲ್ ಟಿ.ಮೇತ್ರೆ, ಸಚೀನ್ ಆರ್.ಕಟ್ಟಿಮನಿ, ಮರಲಿಂಗ ತಾರಫೈಲ್, ಚಂದಪ್ಪ ಎಲ್.ಕಟ್ಟಿಮನಿ ಇದ್ದರು.

emedialine

Recent Posts

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

2 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

2 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

2 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

2 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

2 hours ago

ನಿವೃತ್ತಿ ಜೀವನ ಸುಖಕರವಾಗಿರಲಿ; ಪಾಟೀಲ್

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…

2 hours ago