ಕಾರ್ಮಿಕರಿಗೆ ಸಂಬಂಧಪಟ್ಟ ಕಾನೂನುಗಳಲ್ಲಿ ಬದಲಾವಣೆ ಮಾಡುತ್ತಿರುವುದು ಖಂಡನೀಯ: ನಾಡಗೌಡ

ಕಲಬುರಗಿ; ಕಾರ್ಮಿಕರಿಗೆ ಸಂಬಂಧಪಟ್ಟ ಕಾನೂನುಗಳಲ್ಲಿ ಬದಲಾವಣೆ ಸಲ್ಲ, ಕೊರೋನಾ ಸೋಂಕಿನ ಸಂಬಂಧಪಟ್ಟ ಪರಿಸ್ಥಿತಿಯನ್ನು ಎದುರಿಸಲು ಕೆಲವು ರಾಜ್ಯಸರಕಾರಗಳು ಹಲವು ದಶಕಗಳ ಹೋರಾಟದ ಫಲವಾಗಿ ದೊರಕಿಸಲ್ಪಟ್ಟ ಕಾರ್ಮಿಕರಿಗೆ ಸಂಬಂಧಪಟ್ಟ ಕಾನೂನುಗಳಲ್ಲಿ ಬದಲಾವಣೆ ಮಾಡುತ್ತಿರುವುದು ಖಂಡನಾರ್ಹವಾಗಿದೆ ಎಂದು ಹೈ ಕೋರ್ಟ್‌ನ ನ್ಯಾಯವಾದಿ ಆರ್.ವಿ. ನಾಡಗೌಡ ಅವರು ತಿಳಿಸಿದ್ದಾರೆ.

ಕೊರೋನಾ ಸೋಂಕು ಸೃಷ್ಠಿಸಿದ ಆರ್ಥಿಕ ಪರಿಸ್ಥತಿಯನ್ನು ಎದುರಿಸಲು, ನಾಲ್ಕು ಕಾರ್ಮಿಕ ಸಂಭಂಧ ಪಟ್ಟ ಕಾನೂನು ಹೊರತಾಗಿ ಎಲ್ಲ ಕಾರ್ಮಿಕ ಕಾನೂನುಗಳನ್ನು ಕೆಲಕಾಲ ತಡೆಹಿಡಿಯುವ ಪ್ರಯತ್ನ, ಮಾನವೀಯ ಹಕ್ಕುಗಳನ್ನು ಕಸಿಕೊಳ್ಳುವ ಸರಕಾರದ ಯತ್ನ ಹಾಗೂ ಶ್ರೀಮಂತ ವರ್ಗದ ಷಡ್ಯಂತ್ರವಾಗಿದೆ ಹಾಗೂ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಇದೊಂದು ಪ್ರಮುಖ ಹೆಜ್ಜೆ ಎಂದು ಬಿಂಬಿಸುವುದು ದುರಂತವಾಗಿದೆ ಎಂದರು.

ಕಾನೂನು ಸುಧಾರಣೆಯ ಹೆಸರಲ್ಲಿ ಶ್ರಮಿಕ ವರ್ಗವನ್ನು ದಮನ ಮಾಡುವ ಒಂದು ಪ್ರಯತ್ನವಾಗಿದೆ. ಉದ್ಯೋಗಪತಿಗಳ ಪರವಾಗಿ ಇರುವ ಸರಕಾರದ ಮನಸ್ಥಿತಿಯಾಗಿದೆ.ಕಾರ್ಮಿಕರಿಗೆ ಕೊಟ್ಟ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳುವ ಕುತಂತ್ರ ನಡೆದಿದೆ. ಜೀವಿಸುವ ಹಕ್ಕನ್ನು ಮೊಟಕುಗೊಳಿಸುವ ಷಡ್ಯಂತ್ರ ನಡೆದಿದೆ. ಬಡ ಕಾರ್ಮಿಕರ ರಕ್ತದ ಮೇಲೆ ಔಧ್ಯೋಗಿಕರಣದ ಪುನರುಸ್ಥಾನ ಖಂಡನಿಯ, ಎಲ್ಲಾ ಪ್ರಜ್ಞಾವಂತ ನಾಗರೀಕರು ಈ ಪ್ರಯತ್ನವನ್ನು ಖಂಡಿಸಬೇಕು ಮತ್ತು ವಿರೋಧಿಸಬೇಕು ಎಂದು ಆರ್.ವಿ. ನಾಡಗೌಡ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420