ನೂತನ ಕ್ವಾರಂಟೈನ್ ಸೆಂಟರ್ ತೆರೆಯಲು ಪಾಲಿಟೆಕ್ನಿಕ್ ಕಾಲೇಜಿಗೆ ಟಾಸ್ಕ್ ಫೋರ್ಸ್ ತಂಡ ಭೇಟಿ

ಸುರಪುರ: ಹುಣಸಗಿ ಮತ್ತು ಸುರಪುರ ತಾಲೂಕಿನ ಜನರು ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಂದ ಮರಳಿ ಬರುತ್ತಿರುವ ಹಿನ್ನಲೆಯಲ್ಲಿ ಅವರನ್ನು ಸರ್ಕಾರದ ಆದೇಶದ ಪ್ರಕಾರ ಅವರ ಆರೋಗ್ಯ ತಪಾಸಣೆ ಮಾಡಿ ಅವರನ್ನು ಕ್ವಾರಂಟೈನ್ ಮಾಡಲು ಸುಸಜ್ಜಿತ ಕಟ್ಟಡ ಮತ್ತು ನಗರದ ಹೊರವಲಯದಲ್ಲಿರುವ ಪಾಲಿಟೆಕ್ನಿಕ್ ಕಾಲೇಜನ್ನು ಕ್ವಾರಂಟೈನ ವಾರ್ಡ ಮಾಡಲು ನಿರ್ಧರಿಸಲಾಗಿದೆ ಎಂದು ತಹಶಿಲ್ದಾರ ನಿಂಗಣ್ಣ ಬಿರಾದರ ತಿಳಿಸಿದರು.

ನಗರದ ಪಾಲಿಟೆಕ್ನಿಕ್ ಕಾಲೇಜಿಗೆ ಬೇಟಿ ನೀಡಿ ಮಾತನಾಡಿದ ಅವರು ಈಗಾಗಲೆ ಕರೊನಾ ಮಹಾಮಾರಿಯು ನಮ್ಮ ತಾಲೂಕಿಗೆ ಬರದಂತೆ ಎಲ್ಲಾ ಮುಂಜಾಗೃತಾ ಕ್ರಮವನ್ನು ವಹಿಸಲಾಗಿದೆ ಅದರಂತೆ ಸಾರ್ವಜನಿಕರು ಕೂಡಾ ಈ ವೈರಸ್ ತಗಲದಂತೆ ಸಾಕಷ್ಟು ಎಚ್ಚರ ವಹಿಸಿದ್ದಾರೆ.

ಇಲ್ಲಿಯವರೆಗೂ ಯಾವುದೆ ಪ್ರಕರಣಗಳು ನಮ್ಮ ತಾಲೂಕಿನಲ್ಲಿ ಕಂಡುಬಂದಿಲ್ಲಾ ಮತ್ತು ಇನ್ನು ಮುಂಬರುವ ದಿನಗಳಲ್ಲಿ ಮಹಾರಾಷ್ಟ್ರ ಮತ್ತು ಗೋವಾದಕ್ಕೆ ದುಡಿಮೆಗಾಘಿ ಹೋಗಿರುವ ಜನರನ್ನು ಮರಳಿ ಕರೆತರುತ್ತಿರುವ ಹಿನ್ನಲೆಯಲ್ಲಿ ಖಾಸಗಿ ಶಾಲೆ ಮತ್ತು ಕಾಲೇಜು ಮತ್ತು ವಸತಿನಿಲಯಗಳನ್ನು ಕ್ವಾರಂಟೈನ್ ಸೆಂಟರ್ ಮಾಡಲು ಸಿದ್ದತೆ ನಡೆಸಲಾಗಿತ್ತು ಆದರೆ ಕೆಲವು ವಸತಿನಿಲಯಗಳು ಜನಸಂದಣಿ ಪ್ರದೇಶದಲಿರುವುದರಿಂದ ಅವುಗಳನ್ನು ಕೈಬಿಟ್ಟು ಹೊರವಲಯದಲ್ಲಿರುವ ಪಾಲಿಟೆಕ್ನಿಕ್ ಕಾಲೇಜನ್ನು ಆಯ್ಕೆ ಮಾಡಿಕೊಂಡು ಕ್ವಾರಂಟೈನ್ ಸೆಂಟರ್ ಮಾಡಲಾಗುತ್ತಿದೆ ಎಂದರು.

ಕಾಲೇಜಿನಲ್ಲಿ ಸಾಕಷ್ಟು ಕೋಣೆಗಳು ಮತ್ತು ಶೌಚಾಲಯದ ವ್ಯವಸ್ಥೆ ಮತ್ತು ನೀರಿನ ವ್ಯವಸ್ಥೆ ಇದೆ ಒಂದು ಕೋಣೆಯಲ್ಲಿ 5 ರಿಂದ 8 ಜನರನ್ನು ಕ್ವಾರಂಟೈನ್ ಮಾಡಬಹುದು ಸುಮಾರು ಈ ಸೆಂಟರ್ ನಲ್ಲಿ 200 ರಿಂದ 300 ಜನರನ್ನು ಕ್ವಾರಂಟೈನ್ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.

ಉಪತಹಶಿಲ್ದಾರ ಸುಫಿಯಾ ಸುಲ್ತಾನ, ತಾಪಂ ಇಒ ಅಂಬ್ರೇಶ್, ವೈದ್ಯಾಧಿಕಾರಿ ಡಾ.ಆರ್.ವಿ.ನಾಯಕ, ಪಿಐ ಎಸ್.ಎಮ್.ಪಾಟೀಲ್, ಪೌರಾಯುಕ್ತ ಜೀವನ ಕುಮಾರ, ಸಿಬ್ಬಂದಿಗಳಾದ ಓಂಕಾರ ಪೊಜಾರಿ, ಲಕ್ಷ್ಮಣ, ಶಿವಪುತ್ರಪ್ಪ ಸೇರಿದಂತೆ ಇತರರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

5 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420