ಬಿಸಿ ಬಿಸಿ ಸುದ್ದಿ

ಹೆಲ್ತ್ ವಾಚ್ ಯಾಪ್ ಕುರಿತು ಶಿಕ್ಷಕರಿಗೆ ತರಬೇತಿ ನೀಡಿದ ಜಿಲ್ಲಾಧಿಕಾರಿ ಕೂರ್ಮರಾವ್

ಸುರಪುರ: ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೊರೊನಾ ಕುರಿತು ರಚಿಸಲಾದ ಹೆಲ್ತ್ ವಾಚ್ ಯಾಪ್ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಮಾತನಾಡಿ,ಈ ಹಿಂದೆ ಎಲ್ಲಾ ಮನೆಗಳಿಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.ಆದರೆ ಈಗ ಹೆಲ್ತ್ ವಾಚ್ ಯಾಪ್ ಮೂಲಕ ತಾವೆಲ್ಲರು ನಿಮ್ಮ ನಿಮ್ಮ ಪ್ರದೇಶಗಳಲ್ಲಿ ಸರ್ವೆ ನಡೆಸಿ ಪ್ರತಿ ಮನೆಯಲ್ಲಿರುವವರ ಆರೋಗ್ಯದ ಕುರಿತಾದ ಮಾಹಿತಿಯನ್ನು ಈ ಯಾಪ್‍ಲ್ಲಿರುವ ವಿವಿರಣೆಯ ಅರ್ಜಿಯಲ್ಲಿ ತುಂಬಿ ಆನ್ಲೈನ್ ಮೂಲಕ ರವಾನಿಸುವಂತೆ ತಿಳಿಸಿದರು.

ನಿಮ್ಮ ಏರಿಯಾಗಳಲ್ಲಿನ ಯಾವುದೆ ಕುಟುಂಬಸ್ಥರಿಗೆ ಆರೋಗ್ಯದಲ್ಲಿ ಏನಾದರು ಸಮಸ್ಯೆ ಕಂಡು ಬಂದಲ್ಲಿ ಅದನ್ನು ಈ ಯಾಪ್ ಮೂಲಕ ತಿಳಿಯಲು ಸುಲಭವಾಗಲಿದೆ. ಆದ್ದರಿಂದ ತಾವೆಲ್ಲರೂ ಈ ಯಾಪ್‍ನ್ನು ನಿಮ್ಮ ಮೋಬೈಲಲ್ಲಿ ಡೌನ್ಲೋಡ್ ಮಾಡಿಕೊಳ್ಳುವಂತೆ ತಿಳಿಸಿದರು.ನಂತರ ಯಾಪ್ ಕುರಿತಾಗಿ ಸ್ಕ್ರೀನ್ ಮೂಲಕ ಸಮಗ್ರ ಮಾಹಿತಿಯನ್ನು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಭಗವಾನ್ ಸೋನವಾಣೆ,ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ವೇದಿಕೆ ಮೇಲಿದ್ದರು.ತಹಸೀಲ್ದಾರ್ ನಿಂಗಣ್ಣ ಬಿರಾದಾರ್,ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ. ನಾಯಕ,ಬಿಇಒ ನಾಗರತ್ನ ಓಲೆಕಾರ್,ಸಿಡಿಪಿಒ ಲಾಲಸಾಬ್,ನಗರಸಭೆ ಪೌರಾಯುಕ್ತ ಜೀವನಕುಮಾರ್ ಕಟ್ಟಿಮನಿ ಸೇರಿದಂತೆ ಅನೇಕ ಜನ ಶಿಕ್ಷಕರಿದ್ದರು.

emedialine

Recent Posts

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

14 mins ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

22 mins ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

27 mins ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

1 hour ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

2 hours ago

ಖಾಸಗಿ ಶಾಲೆಗಳಲ್ಲಿ ಡೊನೆಷನ್ ಹೆಚ್ಚಳ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ…

2 hours ago