ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್‌ನಿಂದ ಸಂಸದ ಜಧವ್‌ಗೆ ಘೇರಾವ್: ಕಂಟೆನ್ಮೇಂಟ್ ಜೋನ್ ತೆರವಿನಲ್ಲೂ ರಾಜಕೀಯ

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಕಳೆದ ೨೮ ದಿನಗಳ ಹಿಂದೆ ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿ ನಾಲ್ಕು ವಾರ್ಡ್‌ಗಳು ಕಂಟೆನ್ಮೇಂಟ್ ಜೋನ್ ಆಗಿ ಪರಿವರ್ತನೆಯಾಗಿದ್ದವು. ಮಗು ಗುಣಮುಖವಾಗಿ ಮನೆಗೆ ಬಂದಿದೆ. ಮೇ.೧೦ ರಂದು ಕಂಟೆನ್ಮೆಂಟ್ ಜೋನ್ ತೆರವು ಮಾಡಲು ಸಂಸದ ಡಾ.ಉಮೇಶ ಜಾಧವ ವಾಡಿ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಸಂಸದರ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಜೋನ್ ತೆರವಿಗೆ ಅಡ್ಡಿಪಡಿಸಿ ವಾಗ್ವಾದ ನಡೆಸಿದ ಪ್ರಸಂಗ ನಡೆಯಿತು.

ಕೊರೊನಾ ಸೋಂಕಿನ ಸಂಕಟದಲ್ಲಿ ಬಂದಿಯಾದ ಜನಗಳ ಕಷ್ಟಕ್ಕೆ ಸಂಸದ ಡಾ.ಉಮೇಶ ಜಾಧವ್ ಅವರು ನೆರವಾಗಲಿಲ್ಲ. ಸಮಸ್ಯೆ ಕೇಳಲು ಎಮ್ಮೆಯೂ ಬರಲಿಲ್ಲ. ಈಗ ಜೋನ್ ತೆರವು ಮಾಡಿ ಎಸಿಸಿ ಕಂಪನಿಯ ಲಾರಿಗಳ ಸಾಗಣಿಕೆಗೆ ಅನುಕೂಲ ಮಾಡಿಕೊಡಲು ಬಂದಿದ್ದಾರೆ. ಒಬ್ಬ ಪುರಸಭೆ ಮುಖ್ಯಾಧಿಕಾರಿ ಮಾಡಬಹುದಾದ ಕಂಟೆನ್ಮೆಂಟ್ ಜೋನ್ ತೆರವು ಕಾರ್ಯಕ್ಕೆ ಮಾನ್ಯ ಸಂಸದರು ಬಂದಿರುವುದು ನಾಚಿಕೆ ಗೇಡಿನ ಸಂಗತಿಯಾಗಿದೆ.

ಇಂತಹ ಸಂದರ್ಭದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯ್ಯದ್ ಮಹೇಮೂದ್ ಸಾಹೇಬ, ಪುರಸಭೆ ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಸದಸ್ಯರಾದ ಶರಣು ನಾಟೀಕಾರ, ದೇವಿಂದ್ರ ಕರದಳ್ಳಿ, ಪೃಥ್ವಿರಾಜ ಸೂರ್ಯವಂಶಿ, ತಿಮ್ಮಯ್ಯ ಪವಾರ ಆಕ್ರೋಶ ವ್ಯಕ್ತಪಡಿಸಿದರು.

ಡಿವೈಎಸ್‌ಪಿ ವೆಂಕನಗೌಡ ಪಾಟೀಲ, ಸಿಪಿಐ ಪಂಚಾಕ್ಷರಿ ಸಾಲಿಮಠ ಹಾಗೂ ಪಿಎಸ್‌ಐ ದಿವ್ಯಾ ಮಹಾದೇವ್ ಅವರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ಕೆಲ ಸಮಯ ಪರಸ್ಪರ ತಳ್ಳಾಟ ನಡೆಯಿತು. ಕಾಂಗ್ರೇಸ್ ನಾಯಕರ ಪ್ರಶ್ನೆಗಳಿಗೆ ಯಾವೂದೇ ಪ್ರತಿಕ್ರಿಯೆ ನೀಡದ ಸಂಸದ ಜಾಧವ್, ಕಂಟೆನ್ಮೆಂಟ್ ಜೋನ್ ಗೇಟ್ ತೆರೆದರು. ಕಾಂಗ್ರೆಸ್ ಮುಖಂಡರಾದ ನಾಗೇಂದ್ರ ಜೈಗಂಗಾ, ಚಂದ್ರಸೇನ ಮೇನಗಾರ, ವಿಜಯಕುಮಾರ ಸಿಂಗೆ, ಮಹ್ಮದ್ ಅಶ್ರಫ್, ಭಶೀರ ಖುರೇಶಿ, ಶ್ರವಣಕುಮಾರ ಮೌಸಲಗಿ, ರಾಜಾ ಪಟೇಲ ಸೇರಿದಂತೆ ಕಾರ್ಯಕರ್ತರು ಜಾಧವ್ ಅವರೊಂದಿಗೆ ಮಾತಿನ ಚಕಮಕಿ ನಡೆಸಿದರು.

ಮಾಜಿ ಮಂತ್ರಿ, ಬಿಜೆಪಿಯ ಮುಖಂಡ ಮಾಲಿಕಯ್ಯ ಗುತ್ತೇದಾರ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಮಾಜಿ ಶಾಸಕ ವಾಲ್ಮೀಕಿ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಹಾಗೂ ಜಿಪಂ ಸ್ತಾಯಿ ಸಮಿತಿ ಅಧ್ಯಕ್ಷ ಅರವಿಂದ ಚವ್ಹಾಣ, ಬಸವರಾಜ ಪಂಚಾಳ, ವೀರಣ್ಣ ಯಾರಿ ಮತ್ತಿತರರು ಸಂಸದ ಜಾಧವ ಅವರೊಂದಿಗಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

9 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

9 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

10 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

11 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

11 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

11 hours ago