ಮಾಜಿ ಸಂಸದ ರಾಜಾ ರಂಗಪ್ಪ ನಾಯಕ ವಿಧಿವಶ

ಸುರಪುರ: ರಾಯಚೂರು ಲೋಕಸಭಾದ ಮಾಜಿ ಸಂಸದ ರಾಜಾ ರಂಗಪ್ಪ ನಾಯಕ ರವಿರವಾರ ರಾತ್ರಿ ಸುರಪುದಲ್ಲಿನ ಅವರ ಸ್ವಗೃಹ ವಸಂತ ಮಹಲ್‌ನಲ್ಲಿ ನಿಧನರಾಗಿದ್ದಾರೆ.

61 ವಯಸ್ಸಿನ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು.ಮೃತರಿಗೆ ಒಬ್ಬ ಪುತ್ರ ರಾಜಾ ರೂಪಕುಮಾರ ನಾಯಕ ಹಾಗೂ ಇಬ್ಬರು ಪುತ್ರಿಯರಿದ್ದು, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹಾಗೂ ಕಿರಿಯ ಸಹೋದರ ರಾಜಾ ಮೌನೇಶ್ವರ ನಾಯಕ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ಸುರಪುರದ ರಾಜಕಾರಣದಲ್ಲಿ ತಮ್ಮದೆ ಆದ ಅಸ್ತಿತ್ವವನ್ನು ಹೊಂದಿದ್ದ ರಾಜಾ ರಂಗಪ್ಪ ನಾಯಕರು 24 ಮೇ 1959 ರಲ್ಲಿ ಜನಿಸಿದ್ದು,ಬಹುತೇಕ ಶಿಕ್ಷಣವನ್ನು ಹೈದರಾಬಾದ್‌ನಲ್ಲಿಯೆ ಮುಗಿಸಿದ್ದರು.ತಂದೆ ರಾಜಾ ಕುಮಾರ ನಾಯಕಕೂಡ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು,ಇವರ ಹಿರಿಯ ಸಹೋದರ ರಾಜಾ ವೆಂಕಟಪ್ಪ ನಾಯಕ ಕೂಡ ಶಾಸಕರಾಗಿದ್ದರು.

1987 ರಲ್ಲಿ ಮೊದಲ ಬಾರಿಗೆ ರಾಜಕೀಯ ಪ್ರವೇಶ ಮಾಡಿ 87 ರಿಂದ 92ರ ವರೆಗೆ ಎಸ್.ಎಚ್ ಖಾನಾಪುರ ಮಂಡಲ್‌ನ ಪ್ರಧಾನರಾಗಿ ನಂತರ 1995 ರಲ್ಲಿ ಅಂದಿನ ಗುಲ್ಬರ್ಗ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡು 1996 ರಲ್ಲಿ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

1996ರ 11ನೇ ಲೋಕಸಭೆಗೆ ರಾಯಚೂರು ಲೋಕಸಭಾ ಕ್ಷೇತ್ರದಿಂದ ಅಂದಿನ ಜನತಾದಳ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ 2,14,920 ಮತಗಳನ್ನು ಪಡೆದು ಮೊದಲ ಬಾರಿಗೆ ಸಂಸದರಾಗಿ ಸಂಸತ್ ಪ್ರವೇಶಿಸಿದರು.ದೇವೆಗೌಡರಿಗೆ ಆಪ್ತರಾಗಿದ್ದ ಇವರು ತಂದೆ ರಾಜಾ ಕುಮಾರ ನಾಯಕ ಹಾಗೂ ಅಣ್ಣಾ ರಾಜಾ ವೆಂಕಟಪ್ಪ ನಾಯಕರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರು‌.

ಈ ಭಾಗದ ಪ್ರಭಾವಿ ರಾಜಕಾರಣಿಯ ನಿಧನದಿಂದ ಆಘಾತಗೊಂಡಿರುವ ಅನೇಕ ರಾಜಕೀಯ ಮುಖಂಡರು ಮತ್ತವರ ಅಭಿಮಾನಿಗಳು ರಾಜಾ ರಂಗಪ್ಪ ನಾಯಕರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420