ಲಾಕ್‌ಡೌನ್ ಕಠಿಣ ಪರಿಸ್ಥಿತಿಯಲ್ಲಿಯೂ ದಾಸೋಹಕಾರ್ಯದಲ್ಲಿ ನಿರತ: ಮಾತೋಶ್ರೀ ಅವ್ವಾಜಿ

ಕಲಬುರಗಿ: ೧೮ನೇ ಶತಮಾನದ ಸಂತ ಶರಣಬಸವೇಶ್ವರರ ದಾಸೋಹ ಜೀವನ ಹಾಗೂ ಅವರು ರೂಪಿಸಿದ್ದ ದಾಸೋಹ ಸಂಸ್ಕೃತಿಯನ್ನು ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜೀ, ಮಾತೋಶ್ರೀ ದಾಕ್ಷಾಯಿಣಿ ಅವ್ವಾಜೀ, ಹಾಗೂ ೯ನೇ ಪೀಠಾಧಿಪತಿ ಚಿ.ಪೂಜ್ಯ ದೊಡ್ಡಪ್ಪ ಅಪ್ಪಾಜೀಯವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಕೋವಿಡ್ -೧೯ ಮಾರಣಾಂತಿಕ ರೋಗ ಹರಡುವದನ್ನು ತಡೆಗಟ್ಟಲು ಸರ್ಕಾರದ ನಿಯಮವನ್ನು ಪಾಲಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಲಾಕ್‌ಡೌನ್ ಕಠಿಣ ಪರಿಸ್ಥಿತಿಯಲ್ಲಿಯೂ ಅಗತ್ಯವಿರುವರಿಗೆ ದಾಸೋಹಕಾರ್ಯವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.

ಲಾಕ್‌ಡೌನ್ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿರುವುದಲ್ಲದೇ, ಹಸಿದ ಹೊಟ್ಟೆಗಳ ಪೋಷಣೆ ಹಾಗೂ ಅಗತ್ಯವಿರುವರಿಗೆ ಸಹಾಯ ಮಾಡುತ್ತ ಬಂದಿರುವ ಶತಮಾನೋತ್ಸವದತ್ತ ಸಾಗುತ್ತಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ದಾಸೋಹವನ್ನು ನೀಡುತ್ತಿರುವ ಶ್ರೀಮಂತ ಸಂಪ್ರದಾಯ ಹೊಂದಿದ್ದ ಸಂಸ್ಥೆಯಾಗಿದೆ, ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಆನ್‌ಲೈನ್ ತರಗತಿ ನಡೆಸುವುದು ಮತ್ತು ಆನ್‌ಲೈನ್ ಪರೀಕ್ಷೆಯನ್ನು ನಡೆಸುದರೊಂದಿಗೆ ವಿಶಿಷ್ಟ ಸಂಸ್ಥೆ ಮತ್ತು ವಿಶ್ವವಿದ್ಯಾಲಯವಾಗಿದೆ.

ದೇವಸ್ಥಾನಕ್ಕೆ ದೇವರ ದರ್ಶನಕ್ಕೆಂದು ಆಗಮಿಸಿದ್ದವರೆಲ್ಲರನ್ನು ಪ್ರಸಾದದ ವ್ಯವಸ್ಥೆ ಮಾಡಲಾಗುತ್ತಿತ್ತು. ಕೋವಿಡ್ -೧೯ದಿಂದ ಸರ್ಕಾರ ಆದೇಶ ಹೊರಡಿಸಿದ್ದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ನಿಯಮದಿಂದಾಗಿ, ಪೂಜ್ಯ ಡಾ. ಅಪ್ಪಾಜಿ ಹಾಗೂ ಮಾತ್ರೋಶ್ರೀ ಅವ್ವಾಜೀಯವರು ಸಿಕ್ಕಿಬಿದ್ದ ವಲಸೆ ಕಾರ್ಮಿಕರು ದೈನಂದಿನ ಕೂಲಿಕಾರ್ಮಿಕರು ಲಾಕ್‌ಡೌನ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡವರಿಗೆ ಆಹಾರ, ಮಾಸ್ಕ ಮತ್ತು ಸ್ಯಾನಿಟೈಸರ್‌ಗಳನ್ನು ಉಚಿತವಾಗಿ ವಿತರಿಸುತ್ತಿದ್ದಾರೆ. ಕರ್ತವ್ಯ ನಿರತ ಪೋಲಿಸ್ ಸಿಬ್ಬಂದಿ, ಸಿಕ್ಕಿ ಬಿದ್ದ ವಲಸೆ ಕಾರ್ಮಿಕರು ಹಾಗೂ ತೊಂದರೆಯಲ್ಲಿರುವರ ವಾಸಸ್ಥಳಕ್ಕೆ ಶಾಲಾ ವಾಹನ ಸಾಗಿಸುವ ಮೂಖಾಂತರ ಆಹಾರದ ಪ್ಯಾಕೇಟ್ ನೀರು ಮಾಸ್ಕ್ ಸ್ಯಾನಿಟೈಸರ್ ಪೂರೈಸಲಾಗುತ್ತಿದೆ.

೧೮ನೇ ಶತಮಾನದ ಸಂತರಾದ ಶ್ರೀ ಶರಣಬಸವೇಶ್ವರರು ಆರಂಭಿಸಿದ್ದ ದಾಸೋಹ ಸಂಸೃತಿಯನ್ನು ಶರಣಬಸವೇಶ್ವರ ಸಂಸ್ಥಾನದ ಫೀಠಾಧಿಪತಿಗಳು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಸಂಸ್ಥಾನದ ೭ನೇ ಪೀಠಾಧಿಪತಿಯಾಗಿದ್ದ ಪೂಜ್ಯ ಲಿಂಗೈಕ್ಯ ದೊಡ್ಡಪ್ಪ ಅಪ್ಪಾರವರು ಅನ್ನ ದಾಸೋಹದ ಜೊತೆಗೆ ೧೯೩೪ರಲ್ಲಿ ಮೊದಲ ಬಾರಿಗೆ ಬಾಲಕಿಯರ ಶಾಲೆ ಆರಂಭಿಸುವ ಮೂಲಕ ಶಿಕ್ಷಣ ದಾಸೋಹಕ್ಕೆ ನಾಂದಿಹಾಡುವ ಮೂಲಕ ಶಿಕ್ಷಣ ಸಂಸ್ಥೆಗಳ ಸರಪಳಿ ಪ್ರಾರಂಭಗೊಳ್ಳುವಿಕೆಗೆ ಕಾರಣಿಭೂತರಾದರು.

ಶರಣಬಸವೇಶ್ವರರ ಸಂಸ್ಥಾನದ ಶ್ರೀಮಂತ ಇತಿಹಾಸದಲ್ಲಿ ಮೊದಲ ಬಾರಿಗೆ ಮಾತೋಶ್ರೀ ದಾಕ್ಷಾಯಿಣಿ ಅವ್ವನವರು ವೈಯಕ್ತಿಕ ಆಸಕ್ತಿ ಹಾಗೂ ಸ್ವನೇತೃತ್ವದೊಂದಿಗೆ ದಾಸೋಹ ಸಂಸ್ಕೃತಿಯನ್ನು ಅಗತ್ಯವಿರುವರ ಮನೆ ಬಾಗಿಲಿಗೆ ಕೊಂಡೊಯ್ಯಲಾಗಿದೆ. ದಿನದಿಂದ ದಿನಕ್ಕೆ ಹೆಚ್ಚಿನ ರೀತಿಯಲ್ಲಿ ಆಹಾರ, ನೀರು ಇತರ ಅಗತ್ಯ ವಸ್ತುಗಳನ್ನು ಹಾಗೂ ಸಾವಿರಾರು ಹಸಿದ ಹೊಟ್ಟೆಯ ಹಸಿವನ್ನು ನೀಗಿಸುವ ಅವ್ವಾಜೀಯವರ ಕಾರ್ಯ ಶ್ಲಾಘನೀಯ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆ ಹಾಗೂ ಶರಣಬಸವ ವಿಶ್ವವಿದ್ಯಾಲಯ ಆನ್‌ಲೈನ್ ಮೂಲಕ ಶೈಕ್ಷಣಿಕ ಕಾರ್ಯ ಪರಿಪೂರ್ಣತೆ ಸಾಧಿಸಿಸುವದರ ಜೊತೆಗೆ ಆಂತರಿಕ ಪರೀಕ್ಷೆಯಲ್ಲಿಯೂ ಯಶಸ್ವಿಸಾಧಿಸಿದೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420