ಕನ್ನಡ ಜಾನಪದ ಪರಿಷತ್ ವತಿಯಿಂದ ಹಾಡಿರಿ ಪದಗಳ ವಿಶೇಷ ಕಾರ್ಯಕ್ರಮ

1
112

ಶಹಾಪುರ: ಇಂದು ಸಾಯಂಕಾಲ ೪ ಗಂಟೆಗೆ ಆನ್ ಲೈನ್ ಜೂಮ್ ಆ್ಯಪ್ನಲ್ಲಿ ಕನ್ನಡ ಜಾನಪದ ಪರಿಷತ್ತು ಹಾಗೂ ಕರ್ನಾಟಕ ಜಾನಪದ ಯುವ ಬ್ರಿಗೇಡ್ ವತಿಯಿಂದ ಹಾಡಿರಿ ಪದಗಳ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಯುವ ಬ್ರಿಗೇಡ್ ಮುಖ್ಯಸ್ಥರಾದ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಕನ್ನಡ ವಿಶ್ವವಿದ್ಯಾಲಯ ಹಂಪಿಯ ಸಿಂಡಿಕೇಟ್ ಸದಸ್ಯರಾದ ಡಾ.ವೈ.ಎಂ. ಭಜಂತ್ರಿಯವರು ಉದ್ಘಾಟಿಸಲಿದ್ದು,ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ:ಎಸ್ ಬಾಲಾಜಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಜೊತೆಗೆ ಮುಖ್ಯ ಅತಿಥಿಗಳಾಗಿ ಕನ್ನಡ ಜಾನಪದ ಪರಿಷತ್ತಿನ ಮಂಡ್ಯ ಜಿಲ್ಲಾಧ್ಯಕ್ಷರಾದ ಶ್ರೀ ಗೊರವಾಲೆ ಚಂದ್ರಶೇಖರ್, ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಶ್ರೀ ಶಾಂತ ಕುಮಾರ್ ಭಜಂತ್ರಿಯವರು ಹಾಗೂ ಕನ್ನಡ ಜಾನಪದ ಪರಿಷತ್ತಿನ ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಸಿನ್ನೂರ ಅವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Contact Your\'s Advertisement; 9902492681

ಈ ಕಾರ್ಯಕ್ರಮವನ್ನು ಎಲ್ಲರೂ ಆನ್ಲೈನ್ ಜೂಮ್ ಆ್ಯಪ್ನಲ್ಲಿ ವೀಕ್ಷಿಸಬಹುದು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಯುವ ಬ್ರಿಗೇಡ್ ಮುಖ್ಯಸ್ಥರಾದ ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here