ಸುರಪುರ: ಕೊರೊನಾ ಸೊಂಕು ತಗುಲಿರುವ ನಗರದ ಆಸರ ಮೊಹಲ್ಲಾಕೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಭೇಟಿ ನೀಡಿ ಜನರಲ್ಲಿನ ಆತಂಕ ದೂರಗೊಳಿಸುವ ಪ್ರಯತ್ನ ಮಾಡಿದರು.ಬೆಳಿಗ್ಗೆ ಆಸರ ಮೊಹಲ್ಲಾದ ಇಬ್ಬರಲ್ಲಿ ಕೊರೊನಾ ಸೊಂಕು ಇರುವ ಬಗ್ಗೆ ಶಂಕೆ ಎಲ್ಲೆಡೆ ಹರಡುತ್ತಿದ್ದಂತೆ ಜನರು ಭಯಭೀತರಾಗಿ ಆಸರ ಮೊಹಲ್ಲಾದ ಕಡೆಗೆ ಯಾರೂ ಹೋಗದಂತೆ ಹಾಗು ಅಲ್ಲಿಯ ಜನರು ಬಾರಂತೆ ದಿಗ್ಬಂಧನ ಹರಡಿದ್ದರು.
ಮದ್ಹ್ಯಾನದ ಸುಮಾರಿಗೆ ಶಾಸಕ ರಾಜುಗೌಡ ಆಸರ ಮೊಹಲ್ಲಾಕೆ ಭೇಟಿ ನೀಡಿ ಜನರಿಗೆ ಭೇಟಿ ಮಾಡಿ,ತಾವ್ಯಾರು ಆತಂಕಗೊಳ್ಳುವ ಅವಶ್ಯವಿಲ್ಲ ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಭಯ ಹಸ್ತ ನೀಡಿದರು. ಕೊರೊನಾ ಸೊಂಕು ಇರುವವರನ್ನು ಈಗಾಗಲೆ ಆರೋಗ್ಯ ಇಲಾಖೆಯವರು ಇಲ್ಲಿಗೆ ಬರದಂತೆ ನೋಡಿಕೊಂಡಿದ್ದಾರೆ.ಇದರಿಂದ ಯಾರಿಗೂ ತೊಂದರೆಯಾಗದು.ಆದರೆ ತಾವುಗಳು ಮಾಸ್ಕ್ ಇಲ್ಲದೆ ಹೊರಗೆ ಬರಬೇಡಿ,ಸದಾಕಾಲ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ,ಅನಾವಶ್ಯಕವಾಗಿ ಹೊರಗೆ ಬರುವುದನ್ನು ಬಿಡಿ,ಮನೆಯಲ್ಲಿದ್ದು ಆಗಾಗ ಕೈಗಳನ್ನು ತೊಳೆಯುತ್ತಿರುವಂತೆ ತಿಳಿಸಿದರು.
ನಿಮಗೆ ಏನಾದರು ತೊಂದರೆಯಾದರೆ ತಿಳಿಸಿ ಹಾಗು ಈಗಾಗಲೆ ಆಸರ ಮೊಹಲ್ಲಾ ಸೀಲ್ಡೌನ್ ಎಂದು ಜಿಲ್ಲಾಧಿಕಾರಿಗಳು ಘೋಷಿಸಿದ್ದರಿಂದ ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು. ಸೊಂಕಿತರ ಮನೆಯಿಂದ ನೂರು ಮೀಟರ್ ವರೆಗೆ ಸೀಲ್ಡೌನ್ ಇರಲಿದೆ ಇದಕ್ಕೆ ಜನರು ಸಹಕರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ ನಿಂಗಣ್ಣ ಬಿರಾದಾರ್,ಡಿವೈಎಸ್ಪಿ ವೆಂಕಟೇಶ ಹುಗಿಬಂಡಿ,ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ,ಆರಕ್ಷಕ ನಿರೀಕ್ಷಕ ಎಸ್.ಎಂ.ಪಾಟೀಲ್,ನಗರಸಭೆ ಪೌರಾಯುಕ್ತ ಜೀವನ್ ಕಟ್ಟಿಮನಿ ಸೇರಿದಂತೆ ಅನೇಕ ಜನ ಅಧಿಕಾರಿಗಳಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…