ಶಾಸಕ ಗುತ್ತೇದಾರರಿಂದ ದಿನಸಿ ಪದಾರ್ಥ ವಿತರಣೆ

ಆಳಂದ: ಶಾಸಕ ಗುತ್ತೇದಾರರಿಂದ ದಿನಸಿ ಪದಾರ್ಥ ವಿತರಣೆ ಪಟ್ಟಣದ ವಾರ್ಡ ನಂ ೭,೮,೯ರಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಅವಶ್ಯವಿರುವ ೪೯೦ ಬಡ ಕುಟುಂಬಗಳಿಗೆ ದಿನಸಿ ಪದಾರ್ಥಗಳನ್ನು ಹೊಂದಿರುವ ಆಹಾರ ಪೊಟ್ಟಣಗಳನ್ನು ವಿತರಿಸಿದರು.

ಪಟ್ಟಣದ ಶರಣನಗರದ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಇತ್ತೀಚಿಗೆ ಒಬ್ಬ ವ್ಯಕ್ತಿ ಕೊರೋನಾದಿಂದ ಮೃತಪಟ್ಟಿರುವುದರಿಂದ ಸುತ್ತಮುತ್ತಲಿನ ವಾರ್ಡ ನಂ ೭,೮,೯ರಲ್ಲಿ ಸಿಲಡೌನ್ ಮಾಡಲಾಗಿತ್ತು. ಸರ್ಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಅಂತರವನ್ನು ಕಾಪಾಡುವ ಸಲುವಾಗಿ ಸ್ಥಳೀಯ ಆಡಳಿತದೊಂದಿಗೆ ಸಹಕರಿಸಲು ನಿರ್ಧರಿಸಿ ಇಲ್ಲಿಯವರೆಗೆ ಅಧಿಕಾರಿಗಳಿಗೆ ಸಹಾಯ ಮಾಡಲು ಸೂಚಿಸಿದ್ದೇವು ಎಂದು ಹೇಳಿದರು.

ಈಗ ಸಿಲಡೌನ್ ತೆರುವುಗೊಳಿಸಿರುವುದರಿಂದ ಜನತೆಗೆ ಸಹಾಯಹಸ್ತ ನೀಡಲಾಗುತ್ತಿದೆ. ಸರ್ಕಾರ ಮತ್ತು ನಮ್ಮ ಕಾರ್ಯಕರ್ತರು ಕೊರೋನಾ ಸೋಂಕಿನ ವಿರುದ್ಧ ಹೋರಾಡುತ್ತಿದ್ದಾರೆ. ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಮುಂದೆಯೂ ಕೂಡ ಜನತೆಯ ಜೊತೆ ಇರುತ್ತೇನೆ ಆದರೆ ಜನತೆ ಭಯ ಬೀಳಬಾರದು. ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ಬರುವುದರ ಮೂಲಕ ರೋಗಿನ ವಿರುದ್ಧ ಹೋರಾಡಬೇಕು ಎಂದರು.

ಶಾಸಕರು ಪುಣೆ ನಗರದಲ್ಲಿ ವಾಸವಾಗಿರುವ ತಾಲೂಕಿನ ಕಾರ್ಮಿಕರನ್ನು ಕರೆದುಕೊಂಡು ಬರಲು ಎರಡು ಬಸಗಳನ್ನು ತಮ್ಮ ಸ್ವಂತ ಹಣದಿಂದ ಕಳುಹಿಸಿದ್ದಾರೆ. ಅದರಲ್ಲಿ ಹಲವಾರು ಜನ ಕಾರ್ಮಿಕರು ಈಗಾಗಲೇ ಬುಧುವಾರ ನಸುಕಿನ ಜಾವ ೧ ಗಂಟೆಗೆ ಆಳಂದ ಬಂದು ತಲುಪಿದ್ದಾರೆ. ಶಾಸಕರು ತಮ್ಮ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ವತಿಯಿಂದಲೂ ಬಸಗಳನ್ನು ಪುಣೆ ನಗರಕ್ಕೆ ಕಳುಹಿಸಿದ್ದಾರೆ. ಅಲ್ಲಿರುವ ಕಾರ್ಮಿಕರನ್ನು ಶೀಘ್ರವಾಗಿ ಕರೆದುಕೊಂಡು ಬರಲು ಎಲ್ಲ ವ್ಯವಸ್ಥೆ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ತಹಸೀಲದಾರ ದಯಾನಂದ ಪಾಟೀಲ, ಮುಖಂಡ ಮಲ್ಲಿನಾಥ ಪರೇಣಿ, ಮಲ್ಲಣ್ಣ ನಾಗೂರೆ, ವೀರಣ್ಣ ಹತ್ತರ್ಕಿ, ಅಡವಿರಾಜ ಅತನೂರೆ, ಪುರಸಭೆ ಸದಸ್ಯರಾದ ಶ್ರೀಶೈಲ ಖಜೂರಿ, ರಾಜಕುಮಾರ ಸನ್ಮುಖ, ಮೃತ್ಯುಂಜಯ ಆಲೂರೆ ಸೇರಿದಂತೆ ಇತರರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420